ಕಲಬುರಗಿ: ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ಗುರುವಾರ ಚುನಾವಣಾ ಅಧಿಸೂಚನೆಯನ್ನು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಹೊರಡಿಸಿದ್ದು, ಮೊದಲನೇ ದಿನವೇ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 8 ಅಭ್ಯರ್ಥಿಗಳಿಂದ ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಪ್ರಥಮ ದಿನವಾದ ಇಂದು ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಪೈಕಿ ಅಫಜಲಪುರ, ಸೇಡಂ, ಗುಲಬರ್ಗಾ (ದಕ್ಷಿಣ) ಹಾಗೂ ಆಳಂದ ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿವೆ. ಇನ್ನುಳಿದ 5 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿದೆ. *34-ಅಫಜಲಪುರ ವಿಧಾನಸಭಾ ಕ್ಷೇತ್ರ:* ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಲೀಕಯ್ಯ ವೆಂಕಯ್ಯ ಗುತ್ತೇದಾರ್, ಪಕ್ಷೇತರ ಅಭ್ಯರ್ಥಿಯಾಗಿ ನಿತೀನ ತಂದೆ ವೆಂಕಯ್ಯ ಗುತ್ತೇದಾರ್ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ ಮಲಕಪ್ಪ ನಾಟೀಕಾರ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
41-ಸೇಡಂ ವಿಧಾನಸಭಾ ಕ್ಷೇತ್ರ: ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಬಾಲರಾಜ್ ಅಶೋಕ ಗುತ್ತೇದಾರ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ದತ್ತಾತ್ರೇಯ ಚಂದ್ರಶೇಖರ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
45-ಆಳಂದ ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೋಜರಾಜ ರಾಮಚಂದ್ರ ಪಾಟೀಲ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸುಭಾಷ ರುಕ್ಮಯ್ಯಾ ಗುತ್ತೇದಾರ್ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಮಹೇಶ್ವರಿ ಶಿವಕುಮಾರ ವಾಲಿ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಗುರುವಾರ ಹೊರಡಿಸಿರುವ ಚುನಾವಣಾ ಅಧಿಸೂಚನೆಯನ್ವಯ ಏಪ್ರಿಲ್ 13 ರಿಂದ 20ರ ವರೆಗೆ ಪ್ರತಿದಿನ ಬೆಳಗಿನ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ. ಏಪ್ರಿಲ್ 21 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಇರುತ್ತದೆ. ಚುನಾವಣೆಯ ಮತದಾನವು ಮೇ 10ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜರುಗಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…