ಸುರಪುರ: ಇಂದಿನಿಂದ 20ನೇ ತಾರೀಖಿನ ವರೆಗೆ ಅಭ್ಯಾರ್ಥಿಗಳ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಅಮರೇಶ ನಾಯ್ಕ ತಿಳಿಸಿದರು.
ನಗರದ ತಹಸೀಲ್ದಾರ್ ಕಚೇರಿಯಲ್ಲಿನ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, 20ನೇ ತಾರೀಖಿನ ವರೆಗೆ ನಾಮಪತ್ರ ಸಲ್ಲಿಕೆ,21ಕ್ಕೆ ನಾಮಪತ್ರಗಳ ಪರಿಶೀಲನೆ ಹಾಗೂ 24ನೇ ತಾರೀಖು ನಾಮಪತ್ರ ವಾಪಸ್ಸಾತಿಗೆ ಕೊನೆಯ ದಿನವಾಗಿದೆ ಎಂದರು.ಅಲ್ಲದೆ ಈಬಾರಿ ಪಿಡಬ್ಲ್ಯೂಡಿ ಮತದಾರರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದ್ದು,ಸ್ಪರ್ಧೆಯಲ್ಲಿರುವ ಅಭ್ಯಾರ್ಥಿಗಳ ಪಟ್ಟಿ ಘೋಷಣೆಯಾದ ನಂತರ ನಮ್ಮ ಸಿಬ್ಬಂದಿ ಮನೆ ಮೆನೆಗೆ ಭೇಟಿ ನೀಡಿ ಪಿಡಬ್ಲ್ಯೂಡಿ ಮತ್ತು 80 ವರ್ಷ ಮೇಲ್ಪಟ್ಟ ಮತದಾರರಿಗೆ ಮತಪತ್ರಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.
ಅಲ್ಲದೆ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾ ಪ್ರಕೀಯೆ ನಡೆಯುತ್ತಿರುವುದರಿಂದ ಚುನಾವಣೆ ಮುಗಿಯುವವರೆಗೆ ಸಾರ್ವಜನಿಕರು ತಹಸೀಲ್ದಾರ್ ಕಚೇರಿಯಲ್ಲಿನ ತಮ್ಮ ಕೆಲಸ ಕಾರ್ಯಗಳಿಗಾಗಿ ಮದ್ಹ್ಯಾನ 3 ಗಂಟೆಯ ನಂತರ ಬರುವಂತೆ ತಿಳಿಸಿದರು.
ನಾಮಪತ್ರ ಸಲ್ಲಿಸಲು ಕೇವಲ 5 ಜನರಿಗೆ ಮಾತ್ರ ಅವಕಾಶವಿದ್ದು ಎಲ್ಲ ಪಕ್ಷಗಳವರಿಗೆ ತಿಳಿಸಲಾಗಿದೆ.ಅಲ್ಲದೆ ಐದು ಜನ ಮಾತ್ರವೇ ಬನ್ನಿ ಎಂದು ರಾಜಕೀಯ ಪಕ್ಷಗಳವರಲ್ಲಿ ಮನವಿ ಮಾಡಲಾಗಿದೆ.ಹಾಗೊಮ್ಮೆ ಮೆರವಣಿಗೆ ಏನೆ ಮಾಡಿಕೊಂಡು ಬಂದರೂ 200 ಮೀಟರ್ ಅಂತರದಲ್ಲಿಯೇ ಮೆರವಣಿಗೆ ನಿಲ್ಲಿಸಿ ಐದು ಜನರು ಬಂದು ನಾಮಪತ್ರ ಸಲ್ಲಿಸಬಹುದು ಎಂದು ತಿಳಿಸಿದರು.
ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…
ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…
ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…
ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…
ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…