ಕಲಬುರಗಿ; ಕೇಂದ್ರ ಕಾರಾಗೃಹದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರರವರ 132 ನೇ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಅಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಮುಖ್ಯಸ್ಥರಾದ ಡಾ.ಪಿ. ರಂಗನಾಥ್ರವರು ಡಾ.ಬಾಬಾಸಾಹೇಬ ಅಂಬೇಡ್ಕರರವರ ಭಾವ ಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚಣೆ ಮಾಡಿ ಡಾ.ಬಾಬಾಸಾಹೇಬ ಅಂಬೇಡ್ಕರರವರ ಆಶೆಯದಂತೆ ಸಮ ಸಮಾಜದಲ ನಿರ್ಮಾಣ ಹಾಗೂ ಪ್ರತಿಯೊಬ್ಬರಿಗೆ ಶಿಕ್ಷಣ ದೊರಕಬೇಕು ಎಂಬುದಾಗಿತ್ತು. ಹಾಗಾಗಿ ನಾವೆಲ್ಲರೂ ಶಿಕ್ಷಣವನ್ನು ಪಡೆದು ಸಮ ಸಮಾಜದ ನಿರ್ಮಾಣ ಹಾಗೂ ಅಭಿವೃದ್ಧಿಗೆ ನಮ್ಮದೇ ಆದ ಕೊಡುಗೆಯನ್ನು ನೀಡುವುದರೊಂದಿಗೆ ನಿಜವಾದ ಅರ್ಥದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರರವರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಿದಂತೆ ಆಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧೀಕ್ಷಕರಾದ ಬಿ.ಎಂ.ಕೊಟ್ರೇಶ್, ಸಹಾಯಕ ಅಧೀಕ್ಷಕರುಗಳಾದ ವಿ.ಕೃಷ್ಣಮೂರ್ತಿ, ಹುಸೇನಿ ಪೀರ್, ವೈದ್ಯಾಧಿಕಾರಿಗಳಾದ ಡಾ.ಬಸವರಾಜ ಕಿರಣಗಿ, ಡಾ.ಅಣ್ಣಾರವ್ ಪಾಟೀಲ್, ಸಂಸ್ಥೆಯ ಎಲ್ಲಾ ಜೈಲರ್ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಕಾರಾಗೃಹದ ಎಲ್ಲಾ ಬಂದಿ ನಿವಾಸಿಗಳು ಪಾಲ್ಗೊಂಡು ಡಾ.ಬಾಬಾಸಾಹೇಬ ಅಂಬೇಡ್ಕರರವರ 132 ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಿ ಯಶಸ್ವಿಗೊಳಿಸಲಾಯಿತು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…