ಕಲಬುರಗಿ: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಹಿಳೆಯರ ಹಾಗೂ ಯುವಕರ ಪಾಲ್ಗೊಳ್ಳುವಿಕೆ ಪ್ರಮುಖವಾಗಿದ್ದು, ನೀವು ದೂರ ಉಳಿದರೆ ಕೆಟ್ಟವರು ಆಯ್ಕೆಯಾಗಿಬಿಡುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಮಾರ್ಮಿಕವಾಗಿ ಹೇಳಿದರು.
ಬನ್ನಟ್ಟಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಮಹಿಳೆಯರು ಮುಂದೆ ಬಂದು ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕದೆ ನೀವು ಹಾಗೆ ಹಿಂದುಳಿದುಬಿಡುತ್ತೀರಿ. ಪ್ರಸ್ತುತ ಬೆಲೆಯೇರಿಯಿಂದಾಗಿ ಮಹಿಳೆಯರು ದಿನನಿತ್ಯ ಸಂಸಾರ ನಡೆಸುವುದು ಕಷ್ಟವಾಗುತ್ತಿದೆ. ಹಾಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ, ಮನೆಯ ಯಜಮಾನಿ ಮಹಿಳೆಗೆ ಪ್ರತಿತಿಂಗಳು ರೂ 2000 ನೀಡುತ್ತೇವೆ ಇದು ನಮ್ಮ ವಾಗ್ಧಾನವಾಗಿದೆ ಎಂದರು.
ನಮ್ಮ ವಾಗ್ಧಾನವನ್ನು ಬಿಜೆಪಿಗರು ವಿರೋಧಿಸುತ್ತಿದ್ದಾರೆ ಕಾರಣ ಅವರಿಗೆ ಮಹಿಳೆಯರ ಅಭಿವೃದ್ದಿ ಬೇಕಿಲ್ಲ. ಈಗ ಸಾವಿರಾರು ಸಂಖ್ಯೆಯ ಯುವಕರು ಉದ್ಯೋಗವಿಲ್ಲದೇ ಕಷ್ಟಪಡುತ್ತಿದ್ದಾರೆ. ಹಾಗಾಗಿ ಅವರಿಗೆ ಅನುಕೂಲವಾಗಲು ಪದವಿಧರರಿಗೆ ರೂ 3000 ಹಾಗೂ ಡಿಪ್ಲೋಮಾ ಪಾಸ್ ಆದವರಿಗೆ ರೂ 1500 ಪ್ರತಿತಿಂಗಳು ನೀಡಲಿದ್ದೇವೆ. ಜೊತೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಇವೆಲ್ಲ ನಮ್ಮ ವಾಗ್ಧಾನವಾಗಿದೆ. ಇದಕ್ಕೂ ಕೂಡಾ ಬಿಜೆಪಿವಿರೋಧಿಸುತ್ತಿದೆ. ಯಾಕೆ ಎಂದು ಅವರು ಇಲ್ಲಿಗೆ ಬಂದಾಗ ನೀವು ಅವರನ್ನ ಕೇಳಬೇಕು ಎಂದರು.
ಬಿಜೆಪಿ ಪಕ್ಷ ಚಿತ್ತಾಪುರದ ಅಭಿವೃದ್ದಿ ವಿಷಯವನ್ನು ಮುಂದಿಟ್ಟುಕೊಂಡು ಅಭ್ಯರ್ಥಿಯನ್ನ ಆಯ್ಕೆ ಮಾಡಬೇಕಿತ್ತು. ಆದರೆ, ಈಗಿನ ಅಭ್ಯರ್ಥಿ ಎಂತವರು ಅವರ ಹಿನ್ನೆಲೆ ಏನು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಿಜೆಪಿ ಪಕ್ಷದ ಎರಡು ಬಣಗಳ ನಡುವೆ ಕಳೆದೆರಡು ದಿನಗಳಿಂದ ಹೊಡೆದಾಟ ನಡಯುತ್ತಿರುವ ಮಾಹಿತಿ ಇದೆ. ಬಿಜೆಪಿ ಅಭ್ಯರ್ಥಿಯನ್ನೇ ಸ್ವತಃ ಬಿಜೆಪಿಯ ಮತ್ತೊಂದು ಬಣ ಒಪ್ಪುತ್ತಿಲ್ಲವೆಂದ ಮೇಲೆ ನೀವು ಯಾಕೆ ಒಪ್ಪಬೇಕು? ಎಂದರು.
ನಾನು ನಿಮ್ಮ ಮನೆ ಮಗನಾಗಿಕೆಲಸ ಮಾಡುತ್ತೇನೆ. ನಾನು ಯಾವುದೇ ಭ್ರಷ್ಟಾಚಾರ ದಲ್ಲಿ ತೊಡಗಿಲ್ಲ. ಯಾವುದೇ ಅಕ್ರಮ ಎಸಗಿಲ್ಲ. ಅಟ್ರಾಸಿಟಿ ಕೇಸುಗಳನ್ನು ಹಾಕಿಸಿಲ್ಲ. ನಿಮ್ಮ ಅಭಿವೃದ್ದಿಗೆ ನಾನು ಪರಿಶ್ರಮಪಟ್ಟಿದ್ದೇನೆ. ಶೈಕ್ಷಣಿಕ ಅಭಿವೃದ್ದಿಗೆ ಕೆಲಸ ಮಾಡಿದ್ದೇನೆ. ಈಗ ನಿಮ್ಮ ಮುಂದೆ ಬಂದಿದ್ದೇನೆ ಮತ್ತೊಮ್ಮೆ ಸೇವೆ ಮಾಡಲು ನೀವೆಲ್ಲ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…