ಡಾ. ಬಿ. ಆರ್. ಅಂಬೇಡ್ಕರ್ ವಿಶ್ವ ಜ್ಞಾನಿ

0
20

ಕಲಬುರಗಿ: ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮಹಾನ್ ತಪಸ್ವಿಯಾಗಿದ್ದಾರೆ. ಅವರೊಬ್ಬ ಬಹುಮುಖ ವ್ಯಕ್ತಿತ್ವದ ವಿಶ್ವಜ್ಞಾನಿ. ಅವರ ವೈಜ್ಞಾನಿಕ ಚಿಂತನೆಗಳು ಪ್ರಸ್ತುತ ಮನುಕುಲದ ಉಳಿವಿಗೆ ಹಾಗೂ ದೇಶದ ಪ್ರಗತಿ ಸಾಧನೆಗೆ ಆಧಾರ ಸ್ಥಂಭವಾಗಿವೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್ ಅಭಿಪ್ರಾಯಪಟ್ಟರು.

ಗುಲ್ಬರ್ಗ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯು ಮಹಾತ್ಮಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ ಡಾ. ಬಿ. ಆರ್. ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದರು.

Contact Your\'s Advertisement; 9902492681

ಸಮಾನತೆಯ ಸಂದೇಶ ಸಾರಿದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನದ ಶಿಸ್ತು, ಕಾರ್ಯ ಬದ್ಧತೆ ಮತ್ತು ಕರ್ತವ್ಯ ಪ್ರಜ್ಞೆಯ ಮೂಲಕ ಇಡೀ ಜಗತ್ತನ್ನೇ ಬೆಳಗಿದವರು. ಸಮಾಜದ ಎಲ್ಲಾ ವರ್ಗಗಳ ಬದಲಾವಣೆಗೆ ಬೆಳಕು ತೋರಿದವರು. ಬೆಳಕಿನ ಪ್ರಖರತೆಯು ಎಲ್ಲರ ಸಾಮಾಜಿಕ ಬದುಕನ್ನು ಹೇಗೆ ಪ್ರಕಾಶಿಸಲಿದೆಯೋ ಅದರಂತೆ, ಉತ್ಕøಷ್ಠ ಶಿಕ್ಷಣ, ಉತ್ತಮ ವ್ಯಕ್ತಿತ್ವ, ಜ್ಞಾನದ ಜೊತೆಗೆ ಪ್ರಜ್ಞಾವಂತಿಕೆಯ ವಿವೇಚನೆಯಿಂದ ಮಾತ್ರ ಹೊಸತನದ ಸುಸ್ಥಿರ ಸಮಾಜ ನಿರ್ಮಿಸಲು ಸಾಧ್ಯವಿದೆ. ಇದಕ್ಕೆ ಡಾ. ಬಿ. ಆರ್. ಅಂಬೇಡ್ಕರ್ ಅವರ ಜ್ಞಾನದ ಶಕ್ತಿಯೇ ಪ್ರೇರಣೆ ಎಂದು ಅವರು ವೈಯಕ್ತಿಕ ಬದುಕು, ಕೌಟಂಬಿಕ ಬದುಕಿಗೆ ಆದ್ಯತೆ ನೀಡದೆ ಶೋಷಿತ ಹಾಗೂ ದುರ್ಬಲರ ಪರವಾಗಿ ದಿಟ್ಟತನದಿಂದ ಹೋರಾಡಿದ ಮಹಾನ್ ಚೇತನ ಡಾ. ಬಿ. ಆರ್. ಅಂಬೇಡ್ಕರ್ ಎಂದು ಹೇಳಿದರು.

ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆಯ ನಿದೇರ್ಶಕ ಪ್ರೊ. ಚಂದ್ರಕಾಂತ ಎಂ ಯಾತನೂರ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಡಾ. ಶರಣಪ್ಪ ಸತ್ಯಂಪೇಟೆ ವಿತ್ತಾಧಿಕಾರಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ ವೇದಿಕೆಯಲ್ಲಿದ್ದರು. ಸಿದ್ದಾರ್ಥ ಚಿಮ್ಮಹಿದ್ಲಾಯಿ ಹಾಗೂ ಜಯತೀರ್ಥ ಆದ್ಯ ಬುದ್ಧವಂದನ ಹಾಗೂ ಡಾ. ಬಿ.ಆರ್. ಆಂಬೇಡ್ಕರ್ ಗೀತೆಗಳನ್ನು ಪ್ರಸ್ತುತಪಡಿಸಿದರು. ಡಾ. ಬುದ್ಧ ಭಾರತ್ ಬೆಂಡೆ ವಂದಿಸಿದರು. ಡಾ. ಕಾಶಿನಾಥ ನೂಲ್ಕರ್ ನಿರ್ವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here