ಕಲಬುರಗಿ: ಸನ್ನತಿ ಏತ ನೀರಾವರಿ ಯೋಜನೆ ಮೂಲಕ ಈ ಭಾಗದ ಜಮೀನುಗಳಿಗೆ ನೀರಾವರಿ ಒದಗಿಸುವ ಯೋಜನೆಯನ್ನು ರೂ 431 ಕೋಟಿ ವೆಚ್ಚದಲ್ಲಿ ಜಾರಿಗೊಳಿಸಲಾಗಿದೆ. ಇದು ಭಾಗದ ರೈತರ ಜೀವನಾಡಿಯಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಕೊಲ್ಲೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಕಳೆದ ಐದು ವರ್ಷದ ಅವಧಿಯಲ್ಲಿ ಗ್ರಾಮದ ಅಭಿವೃದ್ದಿಗೆ ಸುಮಾರು 50 ಕೋಟಿ ಅನುದಾನ ಬಳಸಿಕೊಳ್ಳಲಾಗಿದೆ ಇದರಿಂದ ಗ್ರಾಮದಲ್ಲಿ ರಸ್ತೆ, ಚರಂಡಿ, ಶಾಲಾಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.
ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ ಎಂದ ಶಾಸಕರು ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಚಾರ ವ್ಯಾಪಕವಾಗಿದೆ. ಪ್ರತಿ ಹಂತದಲ್ಲಿಯೂ ಭ್ರಷ್ಟತೆ ತಾಂಡವವಾಡುತ್ತಿವೆ. ಇಷ್ಟಾದರೂ ಕೂಡಾ ಕೇಂದ್ರದ ಬಿಜೆಪಿ ನಾಯಕರು ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಬೊಮ್ಮಾಯಿಯನ್ನು ಪಕ್ಕ ಕೂಡಿಸಿಕೊಂಡ ಅಮಿತ್ ಶಾ ಈ ಸಲ ನೀವು ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಭ್ರಷ್ಟಚಾರ ರಹಿತ ಆಡಳಿತ ನೀಡುವುದಾಗಿ ಹೇಳುತ್ತಾರೆ ಹಾಗಿದ್ದರೆ ಈಗ ಇದ್ದುದು ಭ್ರಷ್ಟ ಸರ್ಕಾರ ಎಂದು ಹೇಳಿದಂತಾಯ್ತಲ್ಲವೇ? ಎಂದರು.
ಬಿಜೆಪಿಗರು ಜಾತಿ ಧರ್ಮಗಳ ನಡುವೆ ಜಗಳ ತಂದಿಟ್ಟು ಮತ ಕೇಳುತ್ತಾರೆ. ಇತ್ತೀಚಿಗೆ ಒಳಮೀಸಲಾತಿ ತಂದು ಜಾತಿಗಳ ನಡುವೆ ಮನಸ್ತಾಪ ತಂದೊಡ್ಡಿದ್ದಾರೆ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಮೀಸಲಾತಿ ತಂದಿದ್ದೇವು. 371 ( j) ಮೂಲಕ ಎಲ್ಲ ವರ್ಗದ ಧರ್ಮದ ಜಾತಿಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಇದು ನಮಗೆ ಹಾಗೂ ಬಿಜೆಪಿಗರಿಗೆ ಇರುವ ವ್ಯತ್ಯಾಸ ಎಂದರು.
ಒಳ್ಳೆಯ ಶಿಕ್ಷಣ ನೀಡುವ ಮೂಲಕ ವಿಧ್ಯಾರ್ಥಿಗಳ ಭವಿಷ್ಯ ರೂಪಿಸಲು ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿದ್ದ ಬಿಜೆಪಿ ಸರ್ಕಾರ ಶಾಲೆ ಕೋಣೆಗಳಿಗೆ ಕೇಸರಿ ಬಣ್ಣ ಬಳಿದಿತ್ತು ಎಂದು ಕುಟುಕಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…