ಕಾಂಗ್ರೆಸ್ ಅಭ್ಯರ್ಥಿ‌‌ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

0
158

ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ಕಾರು ಇಲ್ಲಿನ ಆಕಾಶವಾಣಿ ಕೇಂದ್ರ ಹತ್ತಿರ ತಡರಾತ್ರಿ ಅಪಘಾತಕಿಡ್ಡಾಗಿ  ಗಂಭೀರ ಗಾಯಗಳೊಂಡ ಚಿಂಚನಸೂರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಜಿಲ್ಲೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಪಾರ ಬೆಂಬಲಿಗರು/ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆ ಮೂಲಕ ಇಂದು ನಾಮಪತ್ರ ಸಲ್ಲಿಸಲಿರುವ ಬಾಬುರಾವ್ ಚಿಂಚನಸೂರ್, ನಾಮಪತ್ರ ಸಲ್ಲಿಸಲು ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದ್ದರು ಎನ್ನಲಾಗಿದೆ.

Contact Your\'s Advertisement; 9902492681

ಗುರಮಿಠಕಲ್ ಪ್ರಚಾರ ಕಾರ್ಯ ಮುಗಿಸಿ ಯಾದಗಿರಿಯಿಂದ ಕಲಬುರಗಿಗೆ ಆಗಮಿಸುತ್ತಿದ್ದ ಅವರು ನಿದ್ದೆಯ ಮಂಪರಿನಲ್ಲಿ ವಾಹನ ಚಾಲಕ ರಸ್ತೆ ಮದ್ಯ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿರುವುದರಿಂದ ಅಪಘಾತದಲ್ಲಿ ಚಿಂಚನಸೂರ್ ಕಾಲು ಮತ್ತು ಮುಖಕ್ಕೆ ಗಾಯಗಳಾಗಿವೆ.

ಸ್ಥಳೀಯರು ಸಹಕಾರಿಂದ ಗಾಯಗೊಂಡ ಚಿಂಚನಸೂರ್ ಅವರನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಾಲಕ ಮತ್ತು ಗನ್‌ಮ್ಯಾನ್‌ಗೆ ಯಾವುದೇ ಗಾಯಗಳು ಆಗಿಲ್ಲ ಎಂದು ತಿಳಿದುಬಂದಿದ್ದು, ಕಾಲು ಮುಳೆ ಮುರಿತ ಹಿನ್ನಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here