ಕಲಬುರಗಿ: ವೀರಶೈವ ಲಿಂಗಾಯತ ಧರ್ಮವನ್ನು ಒಡೆಯುವುದಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಜೊತೆ ಲಕ್ಷ್ಮಣ ಸವದಿ ಕೈ ಜೋಡಿಸಿದ್ದು, ಅವರೊಬ್ಬ ಅವಕಾಶವಾದಿ ರಾಜಕಾರಣಿ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಗುಡುಗಿದ್ದಾರೆ.
ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಯ ಸಾಧಕ ವ್ಯಕ್ತಿ. ಪಕ್ಷ ಒಬ್ಬ ವ್ಯಕ್ತಿಗೆ ಏನೆಲ್ಲವನ್ನು ಕೊಡಬೇಕೋ, ಅಷ್ಟನ್ನೂ ಪಕ್ಷ ಕೊಟ್ಟಿತ್ತು. ಸೋಲು ಅನುಭವಿಸಿದ ಸಂದರ್ಭದಲ್ಲಿ ಪಕ್ಷ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ, ಉಪ ಮುಖ್ಯಮಂತ್ರಿನ್ನಾಗಿ ಮಾಡಿತ್ತು ಎಂದು ತಿಳಿಸಿದರು.
ಯಾವ ರಾಜಕೀಯ ಸಿದ್ಧಾಂತವನ್ನು ಇಷ್ಟು ವರ್ಷ ವಿರೋಧ ಮಾಡಿದರೋ, ಅಂಥ ಪಕ್ಷದ ಜೊತೆ ಶಾಮೀಲಾಗುವಂಥ ದಾರುಣ ಸ್ಥಿತಿಗೆ ತಲುಪಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ಕೇರಳದಲ್ಲಿ ನಂದಿನಿ ಉತ್ಪನ್ನಕ್ಕೆ ವಿರೋಧದ ಕುರಿತು ಸ್ಪಷ್ಟನೆ ನೀಡಿದ ಸುಧಾ ಹಾಲಕಾಯಿ, ಕೇರಳದಲ್ಲಿ ನಂದಿನಿ ಉತ್ಪನ್ನದ ವಿರೋಧಕ್ಕೆ ಕಾಂಗ್ರೆಸ್ ಕೈವಾಡವಿದೆ. ನಂದಿನಿ ಹಾಲು ಮತ್ತು ಉತ್ಪನ್ನಗಳನ್ನು ಕೇರಳದಲ್ಲಿ ಮಾರಾಟ ಮಾಡಬಾರದು ಎಂದು ಕೇರಳದ ಮಿಲ್ಕ್ ಫೆಡರೇಷನ್ ಆಕ್ಷೇಪ ಸೂಚಿಸಿದೆ. ಇಷ್ಟು ವರ್ಷಗಳ ಕಾಲ ಬೇಡ ಎಂದಿಲ್ಲ ಇವಾಗ ಕೇರಳದಲ್ಲಿ ನಂದಿನಿ ಉತ್ಪನ್ನಕ್ಕೆ ವಿರೋಧ ಮಾಡ್ತಿದಾರೆ, ಇದಕ್ಕೆ ಕಾಂಗ್ರೆಸ್ನವರೇ ಕಾರಣ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಸಮಿತಿ ಸದಸ್ಯರು ಆನಂದ ಚವ್ಹಾಣ, ಅಲ್ಪ ಸಂಖ್ಯಾತರ ಮೊರ್ಚಾ ಕಲಬುರಗಿ ಮಹಾನಗರ ಜಿಲ್ಲಾ ಅಧ್ಯಕ್ಷರು ಅಬ್ದುಲ್ ಅಮೀದ್, ಕಲಬುರಗಿ ಗ್ರಾಮಾಂತರ ಜಿಲ್ಲಾ ವಕ್ತಾರರು ಶ್ರೀ ಚಂದ್ರಶೇಖರ್ ರೆಡ್ಡಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…