ಕಲಬುರಗಿ: ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಅವರ ಪುತ್ರ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರ ವಾಹನಗಳ ಮೇಲೆ ಕಲ್ಲು ತೊರಾಟ ನಡೆಸಿರುವ ಘಟನೆ ಸ್ವ ಕ್ಷೇತ್ರದಲ್ಲಿ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಚಂದನಕೆರಾ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಿರುವ ವೇಳೆ ಶಾಸಕ ಅವಿನಾಶ್ ಜಾಧವ್ ಮತ್ತು ಅವರ ಸಂಗಡಿಗರ ವಾಹನಗಳ ಹಾಗೂ ಅವರ ಬೆಂಬಲಿಗರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಚುನಾವಣೆ ಪ್ರಚಾರ ಮುಗಿಸಿ ಗ್ರಾಮದ ಓಣಿಯಿಂದದ ತೆರಳುವಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತನ್ನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಶಾಸಕ ಜಾಧವ್ ಆರೋಪಿಸಿದ್ದಾರೆ.
ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದೆ ಎಂದು ಶಾಸಕ ಬೆಂಬಲಿಗರು ತಿಳಿಸಿದ್ದು, ಘಟನಾ ಸ್ಥಳಕ್ಕೆ ವುಭಾಗಿಯ ಪೊಲೀಸ್ ಅಧಿಕಾರಿಗಳು, ಕಾಳಗಿ ಪಿಎಸ್ಐ ಮತ್ತು ಸಿಪಿಐ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.