ಕಲಬುರಗಿ: ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಕಾಂಗ್ರೆಸ್ ಬಹುತೇಕ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮುಡ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕಲಬುರಗಿ ಕುಸ್ತಿ ಪೈಲ್ವಾನ್ ಎಂದೇ ಖ್ಯಾತಿಯಾಗಿರುವ ರೇವುನಾಯಕ ಬೆಳಮಗಿ ಅವರನ್ನು ಕಣಕ್ಕೆ ಇಳಿಸಿದೆ.
ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆದಿತ್ತು. ಆದರೆ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ನಂತರ ಜೆಡಿಎಸ್ ಗೆ ಸೇರ್ಪಡೆಗೊಂಡ ಗ್ರಾಮೀಣದಲ್ಲಿ ಸೋಲು ಅನುಭವಿಸಿ ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ರೇವುನಾಯಕ ಬೆಳಮಗಿಗೆ ಈ ಕ್ಷೇತ್ರದ ಆಕಾಂಕ್ಷಿಯಾಗಿದರು.