ಕಲಬುರಗಿ : ನಗರದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಆಡಳಿತ ಮಂಡಳಿಯು ತನಗೆ ನೀಡುತ್ತಿರುವ ನಿರಂತರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಹಾಗೂ ವಿದ್ಯಾರ್ಥಿ ವಿರೋಧಿ ನಡೆಯನ್ನು ವಿರೋಧಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ವಿವಿಯ ಮುಂದಾಳು ಸಂಶೋಧನಾ ವಿದ್ಯಾರ್ಥಿ ಪಿ. ನಂದಕುಮಾರ್ ನಡೆಸುತ್ತಿರುವ ನಾಲ್ಕನೆಯ ದಿನದ ಉಪವಾಸ ಸತ್ಯಾಗ್ರಹಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್ಎಫ್ಐ ) ಕರ್ನಾಟಕ ರಾಜ್ಯ ಸಮಿತಿಯು ಸಂಪೂರ್ಣ ಬೆಂಬಲವನ್ನು ಸೂಚಿಸುತ್ತದೆ.
ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ತಮ್ಮ ದುರಾಡಳಿತವನ್ನು ಪ್ರಶ್ನೆ ಮಾಡುವ ಮತ್ತು ಅದರ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಮಾಡುವವರನ್ನ ಗುರಿಯಾಗಿಸಿಕೊಂಡು ನಿರಂತರವಾಗಿ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ ಕೂಡಲೇ ಹೋರಾಟಗಾರನ ನ್ಯಾಯಯುತ ಬೇಡಿಕೆಗಳನ್ನು ಆಲಿಸಿ ಎಲ್ಲಾ ಬೇಡಿಕೆಗಳನ್ನು ವಿವಿ ಈಡೇರಿಸಿ ಅವರ ಶೈಕ್ಷಣಿಕ ಹಾದಿಯನ್ನು ಸುಗಮಗೊಳಿಸಬೇಕಿದೆ ಇಲ್ಲವಾದರೆ ಮುಂದಾಗುವ ಎಲ್ಲಾ ಬೆಳವಣಿಗೆ ಮತ್ತು ಅನಾಹುತಗಳಿಗೆ ವಿವಿಯ ಬೇಜವ್ದಾರಿ ನಡೆಯೆ ನೇರ ಹೊಣೆಯಗುತ್ತದೆಂದು ವಿವಿ ಸೇರಿ ರಾಜ್ಯಾದ್ಯಂತ ಎಸ್ಎಫ್ಐ ನೇತೃತ್ವದಲ್ಲಿ ಹೋರಾಟವನ್ನು ಮಾಡಬೇಕಾಗುತ್ತದೆಂದು ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯೆಯಾದ ಸುಜಾತ ಹಾಗೂ ಅಲ್ಲಿನ ಉಪವಾಸ ಸತ್ಯಾಗ್ರಹದ ಧರಣಿಯಲ್ಲಿ ಭಾಗವಹಿಸಿ, ವಿದ್ಯಾರ್ಥಿ ನಂದಪ್ಪ ನನ್ನು ಆಸ್ಪತ್ರೆಗೆ ದಾಖಲು ಮಾಡಿ ಜೊತೆಗಿದ್ದು ಬೆಂಬಲ ಸೂಚಿಸುವುದರ ಮೂಲಕ ಆಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…