ಚಿತ್ತಾಪುರ: ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ವಿಶ್ವನಾಥ ಪಾಟೀಲ ಹೆಬ್ಬಾಳˌ ತೊಗರಿ ಮಂಡಳಿ ಮಾಜಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ ನಾಲವಾರ ಹಾಗೂ ಸೋಮಶೇಖರ ಪಾಟೀಲ ಬೆಳಗುಂಪಾ ಸೇರಿದಂತೆ ಹಲವು ಮುಖಂಡರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ ನೇತ್ರತ್ವದಲ್ಲಿ ಮಾತುಕತೆ ನಡೆಸಿದ ಮುಖಂಡರು ನಾಳೆ ಬೇಷರತ್ತಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕೈ ಬಲಪಡಿಸಲಿದ್ದಾರೆ ಎನ್ನಲಾಗುತ್ತಿದೆ.