ಚಿತ್ತಾಪುರ: ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಬಿಜೆಪಿಗೆ ರಾಜೀನಾಮೆ

0
193

ಚಿತ್ತಾಪುರ: ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ತೊಗರಿ ಮಂಡಳಿ ಮಾಜಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ ನಾಲವಾರ ಹಾಗೂ ಸೋಮಶೇಖರ ಪಾಟೀಲ ಬೆಳಗುಂಪಾ ಸೇರಿದಂತೆ ಹಲವು ಮುಖಂಡರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

Contact Your\'s Advertisement; 9902492681

ಶಾಸಕ ಪ್ರಿಯಾಂಕ್ ಖರ್ಗೆ ನೇತ್ರತ್ವದಲ್ಲಿ ಮಾತುಕತೆ ನಡೆಸಿದ ಮುಖಂಡರು ನಾಳೆ ಬೇಷರತ್ತಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕೈ ಬಲಪಡಿಸಲಿದ್ದಾರೆ ಎನ್ನಲಾಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here