ಜೇವರ್ಗಿ: ಶಾಸಕ ಡಾ.ಅಜಯ್ ಧರ್ಮಸಿಂಗ್ ಅವರು ಮಿನಿ ವಿಧಾನಸೌಧದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮೊದಲ ಹಂತದ ನಾಮಪತ್ರ ಸಲ್ಲಿಸಿದರು.
ಶ್ರೀ ಶರಣಬಸವೇಶ್ವರ ದೇವಸ್ಥಾನ,ಹಾಗೂ ಶಿರಡಿ ಸಾಯಿಬಾಬಾ ದೇವಸ್ಥಾನ, ಫಿರೋಜಾಬಾದ್ ದರ್ಗಾ, ನೆಲೋಗಿಯ ಹನುಮಾನ್ ದೇವಸ್ಥಾನ, ತಂದೆ ಧರ್ಮಸಿಂಗ್ ಅವರ ಸಮಾಧಿಯ ಸ್ಥಳ, ಸೊನ್ನದ ಸಿದ್ದಲಿಂಗೇಶ್ವರ ವೀರಕ್ತಮಠ, ಹಾಗೂ ಜೇವರ್ಗಿಯ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ನಂತರ ನಾಮಪತ್ರ ಸಲ್ಲಿಸಿದರು.
ಈ ಸಮಯದಲ್ಲಿ ಕುಟುಂಬದ ಸದಸ್ಯರು ಪಕ್ಷದ ಹಿರಿಯ ಮುಖಂಡರು ಹಾಗೂ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು. ಇದೇ 20 ರಂದು ಬೆಳಿಗ್ಗೆ 11:30 ಗಂಟೆಗೆ ಅಪಾರ ಬೆಂಬಲಿಗರೊಂದಿಗೆ, ಬೃಹತ್ ಮೆರವಣಿಗೆಯ ಮುಖಾಂತರ ನಾಮಪತ್ರ ಸಲ್ಲಿಸುವರು.
ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ…
ಕಲಬುರಗಿ ಲೋಕಸಭೆಗೆ ಪ್ರಪ್ರಥಮ ಬಾರಿಗೆ ಸ್ಪರ್ಧಿಸಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು (ಶುಕ್ರವಾರ) ನಗರದ ಲಾಲಗೇರಿ ಕ್ರಾಸ್ ಹತ್ತಿರದ…
ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ, ಹಿರಿಯ ಪತ್ರಕರ್ತ ವೆಂಕಟೇಶ ಮಾನು (೫೪) ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
ಕಲಬುರಗಿ: ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ ವೆಂಕಟೇಶ ಮಾನು ಅವರ ನಿಧನ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ…
ಕಲಬುರಗಿ; ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ನಿಟ್ಟಿನಲ್ಲಿ ಜುಲೈ 13 ಶನಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ…