ಕಲಬುರಗಿ: ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಆರೋಪದಲ್ಲಿ ಜೈಲು ಸೇರಿರುವ ಆರೋಪಿ ಆರ್.ಡಿ ಪಾಟೀಲ್ ಬಿಗಿ ಭದ್ರತೆಯ ನಡುವೆ ಅಫಜಲಪುರ ಕ್ಷೇತ್ರದಿಂದ ಚುನಾವಣೆಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಅಫಜಲಪುರ ಮತಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ತನ್ನ ಉಮೇದುವಾರಿಕೆ ಸಲ್ಲಿಸಿದ್ದ ಆರ್ಡಿ ಪಾಟೀಲ್, ನಾಮಪತ್ರವ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಸೋಮವಾರ ಅಫಜಲಪುರ ತಹಶೀಲ್ ಕಾರ್ಯಾಲಯಕ್ಕೆ ತೆರಳಿ ತನ್ನ ನಾಮಪತ್ರ ಸಲ್ಲಿಸಿದ್ದಾರೆ.
ಪೊಲೀಸ್ ವಾಹನದಲ್ಲಿ ನಾಮಪತ್ರ ಸಲ್ಲಿಸಲು ಆಗಮಿಸಿದ ಆರ್.ಡಿ ಪಾಟೀಲ್ ಗೆ ನೂರಾರು ಬೆಂಬಲಿಗರು ಹೂಮಳೆಗೈಯ್ದು ಶುಭಕೋರಿ ಪಟ್ಟಣದಲ್ಲಿ ಗ್ರ್ಯಾಂಡ್ ವೆಲ್ಕಮ್ ಮಾಡಲಾಯಿತು.
ಕೆಲವು ದಿನಗಳ ಹಿಂದಷ್ಟೇ ಆರ್.ಡಿ ಪಾಟೀಲ್ ತನು ಸಹ ಚುನಾವಣೆಗೆ ಸ್ಪರ್ಧಿಸುವುದಾಗಿ ಬಗ್ಗೆ ಅಗ್ಯಾತ ಸ್ಥಳದಿಂದ ವಿಡಿಯೋ ಮೂಲಕ ಹಂಚಿಕೊಂಡಿದರು. ಇದರಂತೆ ರಾಜ್ಯದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಅಫಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಎಂ.ವೈ ಪಾಟೀಲ್, ಬಿಜೆಪಿ ಅಭ್ಯರ್ಥಿಯಾಗಿ ಮಾಲಿಕಯ್ಯಾ ಗುತ್ತೇದಾರ್, ಮತ್ತೊಂದೆಡೆ ಮಾಲಿಕಯ್ಯಾ ಸಹೋಹದರಾದ ನತೀನ್ ಗುತ್ತೇದಾರ್ ಸಹ ಈ ಕ್ಷೇತ್ರದಿಂದ ತನ್ನ ಅದ್ರುಷ್ಟ ಪರೀಕ್ಷಿಸಲಿದ್ದಾರೆ.
ಆರ್ಡಿ ಪಾಟೀಲ್ ಗೆಲುವಗೆ ಸಹೋದರ ಮಹಾಂತೇಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮಹಾಂತೇಶ್ ಪಾಟೀಲ್, ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದು ಸಹೋದರ ಆರ್ಡಿಪಿಗೆ ಬೆಂಬಲ ಸೂಚಿಸಿದ್ದಾರೆ.
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ ಬೆಂಗಳೂರಿನ ವಿಜಯನಗರ ನಿವಾಸಿ ಆಯುಶ್ ಡಿಗ್ಗಿ ರಾಜ್ಯ ಮಟ್ಟದ ಅಥ್ಲೇಟಿಕ್ಸನಲ್ಲಿ ಚಿನ್ನದ…
ಕಲಬುರಗಿ: ಶ್ರಾವಣ ಮಾಸದಲ್ಲಿ ಸತ್ಪುರುಷರ ಚರಿತ್ರೆ ಆಲಿಸುವುದರಿಂದ ಮನದ ಮೈಲಿಗೆ ದೂರವಾಗುತ್ತದೆ ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ…
ಕಲಬುರಗಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ.…
ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು…
ಕಲಬುರಗಿ: ಶರಣರಂತೆ ನೈಜತೆಯನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಸಾಧ್ಯ.ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಶಾಸಕ ಅಲ್ಲಮಪ್ರಭು…
ಶಹಾಬಾದ: ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಬಹುದು ಎಂದುಎಸ್ಯುಸಿಐ (ಸಿ) ಪಕ್ಷದ ರಾಜ್ಯ ಸಮಿತಿಯ…