ಶಹಾಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಈ ನಾಡು ಕಂಡ ಒಬ್ಬ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸ್ವಾಭಿಮಾನಿ ಎಂದು ಸಮಾಜದ ಹಿರಿಯ ಮುಖಂಡರಾದ ಶರಣಪ್ಪ ಸಲದಾಪುರ ಹೇಳಿದರು.
ಶಹಾಪುರ ನಗರದ ಚರಬಸವೇಶ್ವರ ಕಮಾನ ದಿಂದ ಹಮ್ಮಿಕೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ಅಂಗವಾಗಿ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಾಣವನ್ನೆ ಮುಡುಪಾಗಿಟ್ಟು ಈ ನಾಡಿಗಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜಯ ತಂದುಕೊಟ್ಟ ಕೀರ್ತಿ ಸಂಗೊಳ್ಳಿ ರಾಯಣ್ಣನಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಶಹಾಪುರ ನಗರದ ಪ್ರಮುಖ ಬೀದಿಯಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರದ ಮೆರವಣಿಗೆ ನಡೆಯಿತು. ಮೆರವಣಿಯುದ್ದಕ್ಕೂ ಸ್ವಾಭಿಮಾನದ ಸಂಕೇತದ ಧ್ವಜಗಳು ರಾರಾಜಿಸುತ್ತಿದ್ದವು
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಮಾತೆಪ್ಪ ಕಂದಕೂರ, ಮುಖಂಡರಾದ ಮರಿಗೌಡ ಹುಲಕಲ,ಬಸವರಾಜಪ್ಪಗೌಡ ವಿಭೂತಿಹಳ್ಳಿ, ಡಾ:ಭೀಮಣ್ಣ ಮೇಟಿ ಹಾಗೂ ಸಮಾಜದ ಎಲ್ಲ ಯುವಕರು ಭಾಗವಹಿಸಿದ್ದರು.