“ವಿಶ್ವ ಪರಂಪರೆ ದಿನಾಚರಣೆ”ಯ ಅಂಗವಾಗಿ ಪರಂಪರೆ ನಡಿಗೆ ವಿಶೇಷ ಉಪನ್ಯಾಸ

ಕಲಬುರಗಿ : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸರಕಾರಿ ವಸ್ತು ಸಂಗ್ರಹಾಲಯ ಕಲಬುರಗಿ ಹಾಗೂ ಇನ್‍ಟ್ಯಾಕ್ ಅಧ್ಯಾಯ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಂಪರೆ ದಿನಾಚರಣೆಯ ಅಂಗವಾಗಿ ಪಾರಂಪರಿಕ ನಡಿಗೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಹಪ್ತಗುಂಬಜ್ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಡಾ. ರಾಜಾರಾಮ ಉಪನಿರ್ದೇಶಕರು, ವಸ್ತುಸಂಗ್ರಹಾಲಯ ಇಲಾಖೆ, ಕಲಬುರಗಿ ಇವರು ‘ವಿಶ್ವಪರಂಪರೆಯ ದಿನಾಚರಣೆ’ಯನ್ನು ಕುರಿತು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ನಮ್ಮ ಸ್ಮಾರಕ, ಸಂಸ್ಕೃತಿ ಮತ್ತು ಪರಂಪರೆ ಹಾಗೂ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ತಿಳಿಹೇಳುವ ಸಲುವಾಗಿ ಇವುಗಳನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಐತಿಹಾಸಿಕ ಸ್ಮಾರಕಗಳು ನಮ್ಮ ದೇಶದ ಆಸ್ತಿ, ಎಂದು ಹೇಳುತ್ತಾ ಪರಂಪರೆ ನಡಿಗೆಗೆ ಚಾಲನೆ ನೀಡಿದರು. ಪರಂಪರೆ ನಡಿಗೆ ಕಾರ್ಯಕ್ರಮವು ಖಾಜಾ ಬಂದೇನವಾಜ ದರ್ಗಾದಿಂದ ಸಾಥ್ ಗುಂಬಜ್‍ವರೆಗೆ ನಡೆಯಿತು. ಸಾಥ್ ಗುಂಬಜ್‍ನಲ್ಲಿ ಸ್ಮಾರಕಗಳ ಕುರಿತು ಡಾ. ಶಂಭುಲಿಂಗ ಎಸ್. ವಾಣಿಯವರು ಉಪನ್ಯಾಸ ನೀಡಿದರು.

ಇಲ್ಲಿ ಬಹಮನಿ ಮನೆತನದ ಐದು ಸುಲ್ತಾನರ ಸಮಾಧಿಗಳಿವೆ. ಆದರೆ ಇಲ್ಲಿ ಏಳು ಗುಮ್ಮಟಗಳಿರುವುದರಿಂದ ಇದನ್ನು ಸಾಥ್ ಅಥವಾ ಹಫ್ತ ಗುಂಬಜ್ ಎಂದು ಕರೆಯುತ್ತಾರೆ. ಇದರಲ್ಲಿ ಫಿರೋಜ್ ಶಹಾನ ಸಮಾಧಿಯು ಅತ್ಯಂತ ಆಕರ್ಷಕವಾದುದು. ಸಂತ ಸುಲ್ತಾನನೆಂದು ಪ್ರಸಿದ್ಧಿ ಪಡೆದ ಫಿರೋಜ್ ಶಹಾನು ಒಬ್ಬ ವಿದ್ವಾಂಸ, ಬರಹಗಾರ, ಉಪನ್ಯಾಸಕ ಹಾಗೂ ತತ್ವಜ್ಞಾನಿಯಾಗಿದ್ದು, ಆತನ ದೂರದೃಷ್ಟಿಯ ಪ್ರತೀಕವಾಗಿ ನಗರದಲ್ಲಿ ಹಲವು ಕಟ್ಟಡಗಳು ರಚನೆಯಾಗಿವೆ ಎಂದು ಡಾ. ವಾಣಿಯವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಬಿ.ಎಸ್. ಗುಳಶೆಟ್ಟಿ ಇನ್‍ಟ್ಯಾಕ್ ಅಧ್ಯಕ್ಷರು ಇವರು ಇನ್‍ಟ್ಯಾಕ್ ಕಾರ್ಯಕ್ರಮಗಳ ಕುರಿತು ಮಾತನಾಡಿದರು.

ಅಸಿತೋಷ ಭರತ ಭೂಷಣ ವಾಸ್ತುಶಿಲ್ಪ ಇವರು ಕಟ್ಟಡಗಳ ರಚನಾ ವಿಧಾನವನ್ನು ಕುರಿತು ಹೇಳಿದರು. ಕಾರ್ಯಕ್ರಮದಲ್ಲಿ ವಸ್ತುಸಂಗ್ರಹಾಲಯದ ಅಧಿಕಾರಿಗಳಾದ ಶಿವಪ್ರಕಾಶ, ಶಬ್ಬೀರ ಅಹಮ್ಮದ, ಜಿಲಾನಿ, ಹಿರಿಯ ನಾಗರಿಕರಾದ ರಾಚಪ್ಪ ಮೇಟೆಕರ್, ಮಲ್ಲಿಕಾರ್ಜುನ ಬಿ., ಶಾಂತಪ್ಪ., ರಾಮಲು ಪಿ. ಹಾಗೂ ವಾಸ್ತುಶಿಲ್ಪಿಗಳಾದ ಮಹಮ್ಮದ್ ಆಬಿದ್, ರಿತುಜಾ ಜಿ. ಮತ್ತು ಇನ್ ಟ್ಯಾಕಿನ ಪದಾಧಿಕಾರಿಗಳು ಸರಕಾರಿ ಸ್ವಾಯತ್ತ್ ಕಾಲೇಜು ಹಾಗೂ ಮಹಿಳಾ ಕಾಲೇಜಿನ ಇತಿಹಾಸ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರಾಧ್ಯಾಪಕರು ಭಾಗವಹಿಸಿದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420