ಕಲಬುರಗಿ: ಎಚ್ಕೆಇ ಸಂಸ್ಥೆಯ ಎಂ.ಎಸ್.ಇರಾನಿ ಕಾಲೇಜಿನಲ್ಲಿ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯ, ರಾಷ್ರೀಯ ಸೇವಾ ಯೋಜನೆ, ಗುಲಬರ್ಗಾ ವಿಶ್ವವಿದ್ಯಾಲಯ, ತಾಲುಕಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಅರಿವು ಮೂಡಿಸುವ ಅಭಿಯಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರಾಜಶೇಖರ ವಿ. ಬೀರನಳ್ಳಿ ಅವರು ಮತದಾತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಸಂಯೋಜಕರಾದ ಪ್ರೊ. ರೋಹಿಣಿಕುಮಾರ ಹಿಳ್ಳಿ, ರಾಷ್ಟೀಯ ಸೇವಾ ಯೋಜನೆಯ ಅಧಿಕಾರಿಗಳಾದ ಡಾ. ಪ್ರಾಣೇಶ ಶಾಂತಾರಾಮ ಮತ್ತು ಡಾ. ಶಂಕ್ರಪ್ಪ ಕೆ., ಬಿ.ಓ. ಬೋಮ್ಮಪ್ಪ, ಬಸವರಾಜ ಬುದ್ಧಿಸಾಗರ, ಹಾಗು ಸಿಬ್ಬಂದಿ ವರ್ಗದವರು ಮತ್ತು ರಾಷ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.