ಕಲಬುರಗಿ: ಕರ್ನಾಟಕದಲ್ಲಿ ಸಾಮಾನ್ಯ ಜನರು ಮತ್ತು ರೈತರ ಮನೆ ಮಾತಾಗಿರುವ ನಂದಿನಿ ಕೆಎಮ್.ಎಫ್ ಈಗಾಗಲೇ ಸಾಕಷ್ಟು ಬಡ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಬೆನ್ನೆಲುಬಾಗಿ ನಿಂತಿದೆ. ಆದರೆ ಈಗ ಕೇಂದ್ರ ಸರ್ಕಾರದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಏಕಾ ಏಕಿಯಾಗಿ ಅಮೂಲ್ ಹಾಲು, ಮೊಸರನ್ನು ರಾಜ್ಯದಲ್ಲಿ ಪರಿಚಿಸುವ ಸಲುವಾಗಿ ಕನ್ನಡಿಗರ, ರೈತರ ಮೇಲೆ ಒತ್ತಾಯವನ್ನು ಹೇರಿ ಸಂಪೂರ್ಣ ಬೆಂಬಲ ಕೊಟ್ಟು ವಿಲಿನ ಮಾಡುವದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪ್ರಶಾಂತಗೌಡ ಆರ್. ಮಾಲಿಪಾಟೀಲ ಖಂಡಿಸಿದ್ದಾರೆ.
ಕೂಡಲೇ ಕೇಂದ್ರ ಸರ್ಕಾರ ನಂದಿನಿ ಕಂಪನಿಯಲ್ಲಿ ಅಮೂಲ್ ವಿಲಿನ ಮಾಡುವದು ನಿಲ್ಲಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯು ಕೇಂದ್ರ ಸರ್ಕಾರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ಮಾಡಲಾಗುವದೆಂದು ಎಚ್ಚರಿಕ್ಕೆ ಕೊಡುತ್ತಿದ್ದೇವೆ.
ಕರ್ನಾಟಕ ಹಾಲು ಮಹಾ ಮಂಡಳಿ ಕೆ.ಎಂ.ಎಫ್ ರಾಜ್ಯದ ಹಾಲು ಉತ್ಪಾದಕರಿಂದ ಸಂಗ್ರಹಿಸಿದ ಹಾಲನ್ನು ರಾಜ್ಯ ಹಾಗೂ ಹೋರ ರಾಜ್ಯಗಳಿಗೆ ಪೂರೈಸುತ್ತಿದೆ. ಕೆಎಂಎಫ್ ಹಾಲು ಅಮೂಲ್ ಜೋತೆ ವಿಲಿನ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿ, ಕೇಂದ್ರ ಸರ್ಕಾರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು, ಈ ವಿಷಯ ಇಲ್ಲಿಗೆ ಬಿಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.