Monday, July 15, 2024
ಮನೆಬಿಸಿ ಬಿಸಿ ಸುದ್ದಿನ್ಯಾಯವಾದಿ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ 22ಕ್ಕೆ

ನ್ಯಾಯವಾದಿ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ 22ಕ್ಕೆ

ಕಲಬುರಗಿ: ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ವತಿಯಿಂದ ನಗರದ ನಂದಿ ಕಂಪ್ಯೂಟರ್ ತರಬೇತಿ ಕೇಂದ್ರದ ಆವರಣದಲ್ಲಿ 22 ರಂದು ಶನಿವಾರ ಬೆಳಗ್ಗೆ 10:45 ಕ್ಕೆ ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯ ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು ವಹಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷರಾದ ಎಂ. ಎನ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ  ಉಪಾಧ್ಯಕ್ಷರಾದ ಭವಾನಿಸಿಂಗ್ ಠಾಕೂರ, ಗುಲಬರ್ಗಾ ಜಿಲ್ಲಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷರಾದ ವಿದ್ಯಾರಾಣಿ ಭಟ್, ಕಲ್ಯಾಣ ಕರ್ನಾಟಕ ನ್ಯಾಯವಾದಿಗಳ ಸೌಹಾರ್ದ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಅಂಬಾರಾಯ ಪಟ್ಟಣಕರ್ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ ವಹಿಸಲಿದ್ದಾರೆ. ಗುಲಬರ್ಗಾ  ಜಿಲ್ಲಾ ನ್ಯಾಯವಾದಿಗಳ ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಅಧ್ಯಕ್ಷರಾಗಿ ಗುಪ್ತಲಿಂಗ ಬಿರಾದಾರ, ಉಪಾಧ್ಯಕ್ಷರಾಗಿ ಧರ್ಮಣ್ಣ ಜೈನಾಪುರ, ಜಯಶೀಲ ಬಧೋಲೆ, ಸಹ ಕಾರ್ಯದರ್ಶಿಯಾಗಿ ಎಸ್ ಕೆ ಚಿಕ್ಕಳ್ಳಿ, ಖಜಾಂಚಿಯಾಗಿ ಶಿವರಾಜ ಪಾಟೀಲ ಅವರಿಗೆ ವಿಶೇಷವಾಗಿ ಸಂಘದ ವತಿಯಿಂದ ಗೌರವಿಸಲಾಗುವುದು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular