ಬಿಸಿ ಬಿಸಿ ಸುದ್ದಿ

ಸುರಪುರದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ

ಸುರಪುರ: ನಗರದ ಶ್ರೀಪ್ರಭು ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ೭೩ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಬೆಳಿಗ್ಗೆ ಒಂಬತ್ತು ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ ಸುರೇಶ ಅಂಕಲಗಿ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ,ಈಬಾರಿ ಕರ್ನಾಟಕದಲ್ಲಿ ಅನೇಕ ಕಡೆ ಮಳೆಯಿಂದ ಅಪಾರ ಪ್ರಮಾಣದ ಹಾನಿಯುಂಟಾಗಿದೆ,ಅದರಲ್ಲೂ ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿರುವ ಕಾರಣ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಸ್ವಾತಂತ್ರ್ಯ ದಿನವೆಂದರೆ ಭಾರತೀಯರಿಗೆ ರಾಷ್ಟ್ರೀಯ ಹಬ್ಬವಿದ್ದಂತೆ,ಈಬಾರಿ ಜಮ್ಮು ಕಾಶ್ಮೀರ ಮತ್ತು ಲಡಾಕ್ ಪ್ರದೇಶದಲ್ಲಿದ್ದ ಕಲಂ ೩೭೦ನ್ನು ರದ್ದುಗೊಳಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಮತ್ತು ಗೃಹ ಸಚಿವ ಅಮೀತ್ ಶಾಜಿಯವರು ದೇಶಕ್ಕೆ ಉಡುಗೊರೆ ನೀಡಿದ್ದಾರೆ,ಆದ್ದರಿಂದ ಕೇಂದ್ರದ ಸರಕಾರಕ್ಕೆ ಅಭಿನಂಧಿಸುವುದಾಗಿ ತಿಳಿಸಿದರು. ಅಲ್ಲದೆ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರವಾಗಿ ಕಾಮಗಾರಿ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿಯೆ ಟೆಂಡರ್ ಕರೆಯಲಾಗುವುದು ಎಂದರು.ತಾಲ್ಲೂಕಿನಲ್ಲಿ ಯಾವುದೆ ಕುಟುಂಬ ಆಶ್ರಯ ಮನೆಗಳಿಲ್ಲದಿದ್ದರೆ ಅಂತವರು ಸರಕಾರದಿಂದ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ.ಮನೆ ಇಲ್ಲದವರು ನಗರಸಭೆಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು.ಇನ್ಮೇಲೆ ಯಾವುದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಬೇಡಿ.ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ತಿಳಿಸಿದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ ಸುರೇಶ ಅಂಕಲಗಿ ಹಾಗು ಪ್ರಾಸ್ತಾವಿಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಮರೇಶ ಕುಂಬಾರ ಮಾತನಾಡಿದರು.ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ,ಗೃಹ ರಕ್ಷಕದಳ,ಎನ್.ಸಿ.ಸಿ,ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳಿಂದ ಆಕರ್ಷಕ ಪಥ ಸಂಚಲನೆ ನಡೆಸಿ ಗೌರವ ವಂದನೆ ಸಲ್ಲಿಸಿದರು.ಹತ್ತನೆ ತರಗತಿಯಲ್ಲಿ ಉತ್ತಮ ಅಂಕಗಳಿಸಿದ ಮೊದಲು ಮೂವರು ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ವಿತರಿಸಲಾಯಿತು.

ಧ್ವಜಾರೋಹಣ ಸಂದರ್ಭದಲ್ಲಿ ಸರಿಯಾಗಿ ಕಟ್ಟದಿರುವ ಕಾರಣದಿಂದ ಬೇಗ ಧ್ವಜಾ ಹರದೆ ಕೆಲ ಸಮಯ ಆತಂಕ ಸೃಷ್ಟಿಸಿದ್ದ ಘಟನೆಯು ಜರುಗಿತು.

ಕಾರ್ಯಕ್ರಮದಲ್ಲಿ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ,ತಾ.ಪಂ ಇಒ ಜಗದೇವಪ್ಪ,ಡಿವಾಯ್‌ಎಸ್‌ಪಿ ಶಿವನಗೌಡ ಪಾಟೀಲ,ಪಿಐ ಆನಂದರಾವ್,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ(ತಾತಾ),ಸುರೇಶ ಸಜ್ಜನ,ಜಿ.ಪಂ.ಸದಸ್ಯ ಮರಿಲಿಂಗಪ್ಪ ಕರ್ನಾಳ,ವೇಣು ಮಾಧವ ನಾಯಕ,ಸಿಡಿಪಿಒ ಲಾಲಸಾಬ್,ಬಿಸಿಯೂಟದ ಅಧಿಕಾರಿ ಮೌನೇಶ ಕಂಬಾರ,ಎಪಿಎಂಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ,ದುರ್ಗಪ್ಪ ಗೋಗಿಕೇರ,ನರಸಿಂಹಕಾಂತ ಪಂಚಮಗಿರಿ,ಗೃಹ ರಕ್ಷಕದಳದ ಕಮಾಂಡರ್ ಯಲ್ಲಪ್ಪ ಹುಲಕಲ್ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳಿದ್ದರು.ಬಿ.ಆರ್.ಪೊಲೀಸ್ ಪಾಟೀಲ ನಿರೂಪಿಸಿದರು,ರಾಜಶೇಖರ ದೇಸಾಯಿ ಸ್ವಾಗತಿಸಿದರು,ಮೌನೇಶ ಕಂಬಾರ ವಂದಿಸಿದರು.

emedialine

View Comments

Recent Posts

ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ 117 ನೇ ಜನ್ಮದಿನೋತ್ಸವ

ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…

3 hours ago

ಶಿವರಾಜ್ ಪಾಟೀಲ್ ಗೋಣಿಗಿಗೆ ಪ್ರಶಸ್ತಿ ಪ್ರದಾನ: ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…

4 hours ago

ಕಲಬುರಗಿ: ಶ್ರೀರೇವಣಸಿದ್ದೇಶ್ವರ ಹುಂಡಿಯಲ್ಲಿ ಚಿನ್ನ, ಬೆಳ್ಳಿ 37.94 ಲಕ್ಷ ರೂ. ನಗದು ಸಂಗ್ರಹ

ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…

6 hours ago

ಸಂಗೀತದಿಂದ ಮಾನಸಿಕ ಆರೋಗ್ಯ ಮತ್ತು ಸ್ಮರಣ ಶಕ್ತಿ ವೃದ್ಧಿ

ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…

20 hours ago

ಕಲಬುರಗಿ: ದಾರಿದೀಪ ಕಂಬಗಳು ಲೋಕಾರ್ಪಣೆ

ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…

20 hours ago

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್.ಯು.ಸಿ.ಐ(ಸಿ) ಮನವಿ

ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420