ಬಸವಣ್ಣನವರ ಸಪ್ತ ಸೂತ್ರಗಳನ್ನು ಅಳವಡಿಸಿಕೊಂಡರೆ ಆದರ್ಶ ವ್ಯಕ್ತಿಗಳಗುತ್ತಿರಿ

ಕಮಲಾಪುರ: ಶಿವಶರಣ ಶ್ರೀ ಬಸವೇಶ್ವರರು ಹೇಳಿದ ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ‌ ಎಂಬ ವಚನದಲ್ಲಿ ತಿಳಿಸಿದ ಸಪ್ತ ಸೂತ್ರಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗುತ್ತಿರಿ ಎಂದು ಶರಣ ಸಾಹಿತಿ ಸಂತೋಷ ಹೂಗಾರ ಹೇಳಿದರು.

ಗುರುವಾರ ಕಮಲಾಪುರ ತಾಲೂಕಿನ ನಾವದಗಿ (ಬಿ) ಗ್ರಾಮದ ದೇಶಿ ಕೇಂದ್ರು ವಸತಿ ಶಾಲೆಯಲ್ಲಿ ಕಮಲಾಪುರ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಮಹಾತ್ಮ ಬಸವೇಶ್ವರರ ಜಯಂತಿ ನಿಮಿತ್ತಯ
ಬಸವ ದರ್ಶನ ವಚನದಲ್ಲಿನ ಬೆಳಕು – ನಮ್ಮೊಳಗಿನ ಕತ್ತಲು ವಿಶೇಷ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು ಬಸವೇಶ್ವರರು ಸಾಮಾಜಿಕ ಅಸಮಾನತೆ, ಮೌಡ್ಯತೆ, ಜಾತಿಯತೆಯ ವಿರುದ್ದ ಕ್ರಾಂತಿ ಮಾಡಿ ಕುಲವೊಂದೆ ಮನಿಷ್ಯ ಜನ್ಮವೆಂಬುದನ್ನು ಸಾರಿದರು.

ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದ ಶ್ರೀನಿವಾಸ ಸರಡಗಿ ಶ್ರೀ ರೇವಣಸಿದ್ದ ಶಿವಾಚಾರ್ಯರು ಇಂದಿನ ಸಮಾಜದಲ್ಲಿ ಕೇವಲ ಅಂಕ ಆಧಾರಿತ ಶಿಕ್ಷಣ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಜೊತೆಗೆ ಮಕ್ಕಳಲ್ಲಿ ಸಂಸ್ಕಾರಗಳು ಬೆಳೆಸಬೇಕು, ಈ ಸಮಾಜದಕ್ಕೆ ಒಬ್ಬ ಉತ್ತಮ ಪ್ರಜೆಯನ್ನಾಗಿಸಬೇಕು, ಸತ್ಯ ನ್ಯಾಯ, ಧರ್ಮದ ಬದುಕು ಎಲ್ಲರಿಗೂ ಮಾದರಿಯಾಗುತ್ತದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪರಮೇಶ್ವರ ಓಕಳಿ‌ ಮಾತನಾಡಿ ಇತ್ತಿಚಿಗೆ ಕಮಲಾಪುರ ಕಸಾಪ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಾಲೂಕಿನ ವ್ಯಾಪ್ತಿಯಲ್ಲಿ ಸಾಹಿತ್ತಿಕ ವಾತಾವರಣ ಮೂಡಿಸುತ್ತಿದೆ, ಅಲ್ಲದೇ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸತ್ಕಾರ ಮಾಡುವ ಮೂಲಕ ಮತ್ತಷ್ಟು ಪ್ರೇರಣೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ದೇಶಿ ಕೇಂದ್ರಿಯ ಶಾಲೆಯ ಅಧ್ಯಕ್ಷರಾದ ಡಾ.ರಾಜೇಂದ್ರ ಯರನಾಳೆ ,ಕಮಲಾಪುರ ಬಸವ ಜಯಂತೋತ್ಸವ ಸಮಿತಿಯ ಅಧಯಕ್ಷರಾದ ಗುರುರಾಜ ಮಾಟೂರ,
ಕಮಲಾಪುರ ಕಸಾಪ ಅಧ್ಯಕ್ಷ ಸುರೇಶ ಲೇಂಗಟಿ , ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ
ಪರಮೇಶ್ವರ ಓಕಳಿ ಮಾತನಾಡಿದರು.

ವಿವಿಧ ಕ್ಷೇತ್ರದ ಸಾಧಕರಾದ; ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ
ಗುರುಲಿಂಗಪ್ಪ ತಡಕಲ ( ಬಸವ ತತ್ವ).ಪ್ರಗತಿಪರ ರೈತ ಮಹಿಳೆ ಸುಜಾತಾ ಪಾಟೀಲ (ಕೃಷಿ) ಮೌಂಟ್ ವೇವ್ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಶಾಂತಕುಮಾರ ಪುರದಾಳ ( ಶಿಕ್ಷಣ). ಕಮಲಾಪುರ ಬಸವ ಜಯಂತೋತ್ಸವ ಸಮಿತಿಯ ಅಧಯಕ್ಷರಾದ ಗುರುರಾಜ ಮಾಟೂರ, ಸಾಮಾಜಿಕ ಹೋರಾಟಗಾರ ಸುನೀಲ ಮಾನ್ಪಡೆ (ಸಾಮಾಜಿಕ ಹೋರಾಟ) , ವಿಶೇಷವಾಗಿ ಸನ್ಮಾನಿಸಲಾಯಿತ.

ಅಣವೀರ ಗೌಡಪಗೋಳ್, ಶಿವಪ್ಪ ಚಿಂಚೋಳಿ, ಚೇತನ ಮಹಾಜನ , ಲಕ್ಷ್ಮೀ ರಾಜನಾಳ, ರೇಣುಕಾ ನರನಾಳ, ಸುಜಾತಾ ಚೌದ್ರಿ, ಫಯಾಜ ಕಮಲಾಪುರ ಇತರರು ಇದ್ದರು.

ಮಹಾಗಾಂವ ಕಸಾಪ ವಲಯ ಅಧ್ಯಕ್ಷ ಅಂಬಾರಾಯ ಮಡ್ಡೆ ನಿರೂಪಿಸಿದರು, ಭುವನೇಶ್ವರಿ ಧಟ್ಟಿ ಸ್ವಾಗತಿಸಿದರು. ಕಸ್ತೂರಿಬಾಯಿ ರಾಜೇಶ್ವರ ಪ್ರಾರ್ಥಿಸಿದರು. ಸಂಜಯಕುಮಾರ ನಾಟೀಕಾರ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420