ಶಹಾಬಾದ: ನಗರದ ಜೇವರ್ಗಿ ರಸ್ತೆಯಲ್ಲಿರುವ ಈದ್ಗಾದಲ್ಲಿ ಶನಿವಾರ ಮುಸ್ಲಿಂ ಸಮುದಾಯದ ಬಾಂಧವರು ಶ್ರದ್ಧಾಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು.
ಬೆಳಿಗ್ಗೆಯಿಂದಲೇ ನಗರದ ವಿವಿಧ ವಾರ್ಡಗಳ ಮುಸ್ಲಿಂ ಬಾಂಧವರು ಹಾಗೂ ಮಕ್ಕಳು ತಂಡೋಪತಂಡವಾಗಿ ಈದ್ಗಾ ಮೈದಾನಕ್ಕೆ ಬಂದು ಅಪಾರ ಸಂಖ್ಯೆಯಲ್ಲಿ ನೆರೆದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರುಗಳು ಕುರಾನ್ ಪಠಿಸಿದರು. ಒಂದು ತಿಂಗಳ ಕಾಲ ಉಪವಾಸ ಆಚರಿಸಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ವ್ರತವನ್ನು ಅಂತ್ಯಗೊಳಿಸಿದರು. ಸಾವಿರಾರು ಜನರು ಪ್ರಾರ್ಥನೆ ನೇರವೇರಿಸಿದ ನಂತರ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು.ಅಲ್ಲದೇ ತಮ್ಮ ಬಂಧು ಮಿತ್ರರಿಗೆ ಮನೆಗೆ ಕರೆದು ವಿಶೇಷ ಭೋಜನ ಸೇವಿಸಿದರು.
ಇದೇ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೇವುನಾಯಕ ಬೆಳಮಗಿ ಈದ್ಗಾಕ್ಕೆ ಬೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು.ಅಲ್ಲದೇ ಹಬ್ಬವನ್ನು ಸಾಮರಸ್ಯದಿಂದ ಎಲ್ಲಾ ಸಮುದಾಯದವರು ಕೂಡಿಕೊಂಡು ಆಚರಿಸುವಂತಾಗಬೇಕು. ರಂಜಾನ್ ಹಬ್ಬ ಎಲ್ಲರ ಬಾಳಲಿ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಡಾ.ರಶೀದ್ ಮರ್ಚಂಟ, ಪೀರಪಾಶಾ, ಕಿರಣ ಚವ್ಹಾಣ,ಫಜಲ್ ಪಟೇಲ್, ಸುಲೇಮಾನ ಕೋಲಾರಕರ್, ಡಾ.ಅಹ್ಮದ್ ಪಟೇಲ್, ಹಾಷಮ್ ಖಾನ, ರಾಜಮಹ್ಮದ್ ರಾಜಾ, ಮತೀನ್ ಸೇಠ,ಅಬ್ದುಲ ಗನಿ ಸಾಬೇರ್,ಅಪ್ಸರ್ ಸೇಠ,ಅಮ್ಜದ್, ಮತೀನ್ ಬಾದಲ್ ಸೇರಿದಂತೆ ಸಾವಿರಾರು ಜನರು ಇದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…