ಸುರಪುರ: ನಗರದ ವಿವಿಧೆಡೆಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮೂಲಕ ವಿಜೃಂಭಣೆಯ ರಮ್ಜಾನ್ ಹಬ್ಬ ಆಚರಿಸಿದರು.ನಗರದ ಝಂಡದಕೇರ ಬಳಿಯಲ್ಲಿನ ಈದ್ಗಾ ಮೈದಾನದಲ್ಲಿ ಶನಿವಾರ ಮುಂಜಾನೆ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಾಗೂ ಪರಸ್ಪರ ಶುಭಾಶಯ ವಿನಮಯಿಸಿಕೊಂಡು ಹಬ್ಬವನ್ನು ಆಚರಿಸಿದರು.
ಅದೇರೀತಿಯಾಗಿ ರಂಗಂಪೇಟೆಯ ಈದ್ಗಾ ಮೈದಾನದಲ್ಲಿಯೂ ಸಡಗರ ಸಂಭ್ರಮದ ರಮ್ಜಾನ್ ಆಚರಿಸಲಾಯಿತು.ಎಲ್ಲಾ ಮುಸ್ಲಿಂ ಬಾಂಧವರು ಹೊಸ ಬಟ್ಟೆಯನ್ನು ಧರಿಸಿ ದೊಡ್ಡ ಮಸೀದ್ ನಿಂದ ಕಲ್ಮಾ ಓದುತ್ತ ಹಸನಾಪುರ ಬಳಿಯ ಈದ್ಗಾ ಮೈದಾನಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಹಬ್ಬ ಶುಭಾಷಯ ವಿನಿಮಯಿಸಿಕೊಂಡರು.
ರಮ್ಜಾನ್ ಹಬ್ಬದ ಅಂಗವಾಗಿ ಸುರಪುರ ಮತ್ತು ರಂಗಂಪೇಟೆಯ ವಿವಿಧ ಕಡೆಗಳಲ್ಲಿ ಪ್ಯಾರಾ ಮಿಲಿಟರಿ ಪಡೆ,ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿತ್ತು.
ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಮುಖರಾದ ಈದ್ಗಾ ಕಮಿಟಿ ಅಧ್ಯಕ್ಷ ಎ.ಆರ್ ಪಾಷಾ,ಸೈಯ್ಯದ್ ಅಹ್ಮದ್ ಪಾಶಾ ಖಾದ್ರಿ,ಹುಸೇನ್ ಗುತ್ತೇದಾರ,ಮಹ್ಮದ್ ಮೌಲಾ ಸೌದಾಗರ್,ಮಹ್ಮದ್ ಖಾಜಾ ಗುಡಗುಂಟಿ,ಖಾಜಾ ಖಲೀಲ ಅಹ್ಮದ್ ಅರಕೇರಿ,ಇಫ್ತಿಕಾರ್ ಒಂಟಿ,ಶೇಖ್ ಮಹಿಬೂಬ ಒಂಟಿ,ಅಬ್ದುಲ ಗಫೂರ ನಗನೂರಿ,ಹೈವiದ್ ಪಠಾಣ್,ಉಸ್ತಾದ್ ವಜಾಹತ್ ಹುಸೇನ್,ಮೊಹ್ಮದ್ ಹುಸೇನ್ ಅಡ್ವೋಕೆಟ್,ಅಬೀದ್ ಹುಸೇನ್ ಪಗಡಿ,ಮೆಹಬೂಬಸಾಬ್ ಜಮಾದಾರ್,ಕಲೀಮುದ್ದಿನ್ ಫರೀದಿ,ಗೌಸಮಿಯಾ ಜಮಾದಾರ್ ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.
ಕಲಬುರಗಿ: ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆಯಲ್ಲಿ ಏರುಪೇರು ಸಂಭವಿಸಿ ವಕ್ತಿ ಮೃತಪಟ್ಟಿದ್ದಾರೆಂದು ಆರೋಪಿಸಿ ಧೀಡಿರನೇ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು…
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…