ವಿಭೂತಿ ಕೊಡುವ ಕೈಗಳು ದಾರ ಕೊಡುತ್ತಿವೆ. ರುದ್ರಾಕ್ಷಿ ಕೊಡುವ ಕೈಗಳು ತಾಯಿತ ಕೊಡುತ್ತಿವೆ. ಲಿಂಗ ಕೊಡುವ ಕೈಗಳು ನಿಂಬೆಹಣ್ಣು ಕೊಡುತ್ತಿರುವುದು ಸುರ್ದೈವದ ಸಂಗತಿ. – ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಕಲಬುರಗಿ.
ಕಲಬುರಗಿ: ಬಸವಣ್ಣನವರ ವಾರಸುದಾರರು ಎಂದು ಕರೆಯಿಸಿಕೊಳ್ಳುವ ಲಿಂಗಾಯತರಷ್ಟು ನಿರಭಿಮಾನಿಗಳು ಯಾರೂ ಇಲ್ಲ ಎಂದು ಶ್ರೀಶೈಲಂ ಸಾರಂಗ ಮಠ ಹಾಗೂ ಸುಲಫಲ ಮಠದ ಜಗದ್ಗುರು ಸಾರಂಗಧರ ಸ್ವಾಮೀಜಿ ನುಡಿದರು.
ಬಸವ ಜಯಂತಿ ಉತ್ಸವ ಸಮಿತಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಬಸವೇಶ್ವರ ವೃತ್ತದಲ್ಲಿ ಭಾನುವಾರ ಜರುಗಿದ ಬಸವ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಅಸಮಾನತೆ, ಭ್ರμÁ್ಟಚಾರ ತುಂಬಿ ತುಳುಕಾಡುತ್ತಿರುವ ಇಂದಿನ ಸಮಾಜಕ್ಕೂ ಬಸವತತ್ವ ಅಗತ್ಯವಿದೆ ಎಂದು ಅವರು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಿದ ಶರಣ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ, ಇವನಾರವ ಎಂದು ದೂರಿಕರಿಸದೆ ಇವ ನಮ್ಮವ ಎಂದು ಅಪ್ಪಿಕೊಳ್ಳುವ ಧರ್ಮ ಬಸವ ಧರ್ಮವಾಗಿದ್ದು, ಬಸವಾದಿ ಶರಣರ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಚನ ಸಾಹಿತ್ಯ ಪ್ರಚಾರ, ಪ್ರಸಾರವಾಗದಂತೆ ಷಢ್ಯಂತ್ರ ಹೂಡಿದ್ದ ಪಟ್ಟಭದ್ರಶಕ್ತಿಗಳು ಲಿಂಗಾಯತರನ್ನು ಮತ ಬ್ಯಾಂಕ್ ಆಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಕುಮಾರ ಮೋದಿ , ಸಮಿತಿ ಗೌರವಾಧ್ಯಕ್ಷ ಕಲ್ಯಾಣಪ್ಪ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಸೇರಿದಂತೆ ಅನೇಕರು ವೇದಿಕೆಯಲ್ಲಿ ಇದ್ದರು. ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ವೀರಣ್ಣ ಹೊನ್ನಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಡಾ. ಶ್ರೀಶೈಲ ಘೂಳಿ,ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಮಲ್ಲಿಕಾರ್ಜುನ ಪಾಟೀಲ ಕಾಳಗಿ, ಶರಣು ಭೂಸನೂರ,
ಶರಣಗೌಡ ಪಾಳಾ. ವೀರಣ್ಣ ಗೋಳೆದ, ಡಾ.ನಾಗವೇಣಿ ಪಾಟೀಲ ರೇವೂರ ಇದ್ದರು.
ಬಸವ ಜಯಂತಿ ಅಂಗವಾಗಿ 165 ಜನ ರಕ್ತದಾನ ಮಾಡಿದರು. ನಂತರ ನಗರದ ನಗರೇಶ್ವರ ಶಾಲೆಯಿಂದ ಬಸವೇಶ್ವರ ವೃತ್ತದವರೆಗೆ ಬಸವಣ್ಞನವರ ಭಾವ ಚಿತ್ರದ ಭವ್ಯ ಮೆರವಣಿಗೆ ನಡೆಯಿತು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…