ಸುರಪುರ : ವಕೀಲರ ಸಂಘದ ಕಚೇರಿಯಲ್ಲಿ ಮತಯಾಚನೆ

0
8

ಸುರಪುರ: ನಗರದ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ವಕೀಲರನ್ನುದ್ದೇಶಿಸಿ ಮಾತನಾಡಿದ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕರು, ಕಾಂಗ್ರೆಸ್ ಪಕ್ಷ ಬಡವರು, ದಲಿತ ಹಾಗೂ ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗಗಳು ಹಾಗೂ ಸಮುದಾಯದವರ ಅಭಿವೃದ್ಧಿ ಪರ ಇರುವ ಪಕ್ಷವಾಗಿದ್ದು ಹಿಂದಿನ ಸಿದ್ಧರಾಮಯ್ಯ ನೇತೃತ್ವದ ಸರಕಾರದಲ್ಲಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಸರ್ವಾಂಗೀಣ ಏಳ್ಗೆಗಾಗಿ ಸಾಕಷ್ಟು ಶ್ರಮಿಸಿದ್ದು ಸುರಪುರ ಕ್ಷೇತ್ರದಲ್ಲಿ ಕೂಡಾ ನನ್ನ ಹಿಂದಿನ ಅಧಿಕಾರ ಅವಧಿಯಲ್ಲಿ ಜನರ ಕುಂದು ಕೊರತೆಗಳಿಗೆ ಸ್ಪಂದಿಸಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದೇನೆ ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಈ ಬಾರಿಯ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ ನನ್ನನ್ನು ಗೆಲ್ಲಿಸಿದಲ್ಲಿ ವಕೀಲರ ಸಂಘದ ಬೇಡಿಕೆಗಳಿಗೆ ಸ್ಪಂದಿಸುತ್ತೇನೆ ಹಾಗೂ ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಹೇಳಿದರು.

Contact Your\'s Advertisement; 9902492681

ವಕೀಲರ ಸಂಘದ ಅಧ್ಯಕ್ಷ ಎನ್.ಜೆ.ಬಾಕ್ಲಿ, ಮುಖಂಡ ವೆಂಕೋಬ ಯಾದವ್, ಹಿರಿಯ ನ್ಯಾಯವಾದಿಗಳಾ ಜಿ.ತಮ್ಮಣ್ಣ, ನಿಂಗಣ್ಣ ಚಿಂಚೋಡಿ, ದೇವೀಂದ್ರಪ್ಪ ಬೇವಿನಕಟ್ಟಿ, ಆದಪ್ಪ ಹೊಸ್ಮನಿ, ಮನೋಹರ ಕುಂಟೋಜಿ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here