ಬಿಸಿ ಬಿಸಿ ಸುದ್ದಿ

ಡಾ. ರಾಜಕುಮಾರ್ ಜನ್ಮ ದಿನಾಚರಣೆ

ಸುರಪುರ:ನಗರದ ರಂಗಂಪೇಟೆಯ ನಗರೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಖಾಸ್ಗತೇಶ್ವರ ನೃತ್ಯ ಕಲಾ ತರಬೇತಿ ಸಂಸ್ಥೆಯ ವತಿಯಿಂದ ವರನಟ ಡಾ:ರಾಜಕುಮಾರ್ ಅವರ 95ನೇ ಜನ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ನೃತ್ಯ ತರಬೇತಿದಾರ ಅನೀಲ ಕುಮಾರ ಮಾತನಾಡಿ,ಕನ್ನಡ ಚಿತ್ರರಂಗದಲ್ಲಿ ಡಾ:ರಾಜಕುಮಾರ್ ಎಂದರೆ ಅವರೊಬ್ಬರ ಧೀಮಂತ ನಟ,ಕನ್ನಡದಲ್ಲಿ ಎರಡು ನೂರ ಹತ್ತು ಸಿನೆಮಾಗಳಲ್ಲಿ ನಟಿಸಿ ನಾಡಿನ ಎಲ್ಲರ ಮನ ಗೆದ್ದ ನಟರಾಗಿದ್ದರು,ಅವರು ಕೇವಲ ನಟ ಮಾತ್ರವಲ್ಲದೆ ಗಾಯಕರು ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಗೋಕಾಕ ಚಳವಳಿಯಲ್ಲಿ ಭಾಗವಹಿಸಿ ನಾಡಿನ ಜನರ ಮನದಲ್ಲಿ ಶಾಶ್ವತವಾಗಿ ಉಳಿದುಕೊಂಡ ಮೇರು ನಟರು.ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು,ಅಲ್ಲದೆ ಕರ್ನಾಟಕ ರತ್ನ,ದಾದಾ ಸಾಹೇಬ್ ಪಾಲ್ಕೆ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ.

ಅಂತಹ ಕನ್ನಡ ಕಣ್ಮಣಿ ನಟರ ಜನ್ಮ ದಿನವನ್ನು ಇಂದು ನಮ್ಮ ಸಂಸ್ಥೆಯಿಂದ ಆಚರಿಸುತ್ತಿರುವುದು ತುಂಬಾ ಖುಷಿಯ ಸಂಗತಿಯಾಗಿದೆ ಎಂದರು.ಅಲ್ಲದೆ ನಮ್ಮ ಸಂಸ್ಥೆಯು ಇಂತಹ ಅನೇಕ ಮಹನಿಯರ ಜನ್ಮ ದಿನವನ್ನು ಆಚರಿಸುವ ಜೊತೆಗೆ ನಮ್ಮಲ್ಲಿ ನೃತ್ಯ ಕಲಿಯುವ ಎಲ್ಲ ಮಕ್ಕಳಲ್ಲಿ ನೃತ್ಯ ಕಲಿಸುವ ಜೊತೆಗೆ ನಾಡು ನುಡಿಯ ಕುರಿತು ಕಲೆ,ಭರತನಾಟ್ಯದಂತ ಕಲೆಗಳ ಕುರಿತು ಅಭಿಮಾನ ಮೂಡಿಸುವ ಸಾಂಸ್ಕøತಿಕ ಹವ್ಯಾಸ ಬೆಳೆಸುವ ಮುಖ್ಯ ಉದ್ದೇಶವನ್ನು ಹೊಂದಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಮೊದಲಿಗೆ ಡಾ:ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ,ಕೇಕ್ ಕತ್ತರಿಸಿ ಎಲ್ಲ ಮಕ್ಕಳಿಗೆ ಸಿಹಿ ಹಂಚಿ ಗೌರವ ವಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ನೃತ್ಯ ತರಬೇತಿದಾರರಾದ ಲಕ್ಷ್ಮೀ ಎಸ್.ಕುಂಬಾರ,ಮಲ್ಲಿಕಾರ್ಜುನ ಕಟ್ಟಿಮನಿ ಸೇರಿದಂತೆ ನೃತ್ಯ ಕಲಿಕೆಯ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

4 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

4 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

4 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

5 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

5 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

5 hours ago