ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರ ಆದೇಶದ ಮೇರೆಗೆ ಕಾಂಗ್ರೆಸ್ ಸೇವಾದಳದ ಗುಲಬರ್ಗಾ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಭೀಮರಾಯ ಪೂಜಾರಿ ಮದರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕರಾದ ಮಹೇಶ ಎಚ್.ಸುತಾರ್ ತಿಳಿಸಿದ್ದಾರೆ.
ನೀವು ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ದರಾಗಿ ಯಾವುದೇ ಬೇರೆ ರಾಜಕೀಯ ಆಸೆ ಆಮಿಶಗಳಿಗೆ ಒಳಗಾಗದೆ, ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು ಹಾಗೂ ಪ್ರಾಮಾಣಿಕತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ಬರದ ರೀತಿಯಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಈ ಮೂಲಕ ತಮಗೆ ತಿಳಿಸುತ್ತಾ ಜಾತಿ, ಧರ್ಮ, ಮತ, ಮೇಲು, ಹಾಗೂ ಯಾವುದೇ ಕಲಹ ಬಾರದ ರೀತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು.
ತಾವುಗಳು ತಕ್ಷಣದಿಂದ ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಕೆ.ಪಿ.ಸಿ.ಸಿ.ಯ ಮಾರ್ಗದರ್ಶನದಲ್ಲಿ ರಾಜ್ಯದ ನಾಯಕರು ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ಕಾಂಗ್ರೆಸ್ ಸೇವಾದಳದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ಮಾಡಲು ಕಾರ್ಯೋನ್ಮುಖರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.