ಕಲಬುರಗಿ; 890ನೇ ಬಸವ ಜಯಂತಿ ಅಂಗವಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರವಿವಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಡಾ. ಪಿ. ರಂಗನಾಥ್ ಅವರು ಜಗಜ್ಯೋತಿ ಬಸವೇಶ್ವರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ.ಎಂ.ಕೊಟ್ರೇಶ್, ಸಹಾಯಕ ಅಧೀಕ್ಷಕ ವಿ.ಕೃಷ್ಣಮೂರ್ತಿ, ವೈದ್ಯಾಧಿಕಾರಿಗಳಾದ ಡಾ. ರವೀಂಧ್ರ ಬನ್ನೇರಿ, ಡಾ. ಅಣ್ಣಾರಾವ್ ಪಾಟೀಲ್, ಸಂಸ್ಥೆಯ ಎಲ್ಲಾ ಜೈಲರ್ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಕಾರಾಗೃಹದ ಎಲ್ಲಾ ಬಂದಿ ನಿವಾಸಿಗಳು ಉಪಸ್ಥಿತರಿದ್ದರು.