ಮುಂಗಾರು ಪೂರ್ವ ಬೇಸಾಯ ಸಿದ್ದತೆಗಳು

0
9

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಯಂತೆ ಮಳೆಗಳು ಆಗುತ್ತವೆ ಎಂಬುವುದು ಹವಾಮಾನ ತಜ್ಞರ ಅಭಿಪ್ರಾಯ. ಆದ್ದರಿಂದ ರೈತರು ಸ್ಥಳೀಯ ಪರಿಸ್ಥಿತಿಗಳನ್ನು ಅವಲೋಕಿಸಿ ಮುಂಗಾರು ಬೆಳೆಗಳ ಯೋಜನೆಯನ್ನು ಹಮ್ಮಿಕೊಳ್ಳುವುದು ಸೂಕ್ತ. ಈಗಾಗಲೇ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಈಗಾಗಲೇ ಪೂರ್ವ ಮುಂಗಾರು ಬಿತ್ತನೆ ಹಲವು ಜಿಲ್ಲೆಯಗಳಲ್ಲಿ ಆರಂಭವಾಗಿದೆ.

ಕೈಗೊಳ್ಳುತ್ತಿದ್ದಾರೆ. ರೈತರು ತಮ್ಮ ಜಮೀನುಗಳಲ್ಲಿ ಕುಂಟೆ-ರಂಟೆಗಳನ್ನು ಹೊಡೆದು ಮಣ್ಣು ಮತ್ತು ನೀರು ಸಂರಕ್ಷಣೆಗಾಗಿ ಚೌಕ ಮಡಿಗಳನ್ನು ಮತ್ತು ದಿಂಡು ಸಾಲುಗಳನ್ನು ಇಳಿಜಾರಿಗೆ ಅಡ್ಡಲಾಗಿ ನಿರ್ಮಿಸುವುದರಿಂದ, ಬಂದ ಮಳೆ ನೀರು ಮಡಿಗಳಲ್ಲಿ ಮತ್ತು ಬೋದುಗಳಲ್ಲಿ ನಿಲ್ಲುವುದರಿಂದ ಮಣ್ಣಿನ ತೇವಾಂಶ ಹೆಚ್ಚು ಸಂಗ್ರಹವಾಗಿ ಮುಂದೆ ಮುಂಗಾರಿನಲ್ಲಿ ಬೆಳೆಯುವ ಬೆಳೆಗಳಿಗೆ ಸಹಕಾರಿಯಾಗುತ್ತದೆ. ಬೆಳೆ ಪರಿವರ್ತನೆ, ಸಾವಯವ ಗೊಬ್ಬರ ಬಳಕೆ, ಸ್ವಚ್ಛ ಸಾಗುವಳಿ ಮತ್ತು ಮಾಗಿ ಉಳುಮೆಯನ್ನು ನೇಗಿಲು ಅಥವಾ ಟ್ರ್ಯಾಕ್ಟರ್ ಸಹಾಯದಿಂದ ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡುವುದರಿಂದ ಮಣ್ಣಿನ ಸವಕಳಿ ತಡೆಗಟ್ಟಿ ಸಂರಕ್ಷಿಸಬಹುದು.

Contact Your\'s Advertisement; 9902492681

ಮಣ್ಣು ಮತ್ತು ನೀರು ಪರೀಕ್ಷೆ ಮಾಡಿಸುವ ಮೂಲಕ ಜಮೀನಿನ ಪೋಷಕಾಂಶಗಳ ಮಟ್ಟವನ್ನು ತಿಳಿಯಬಹುದು. ಸಮಸ್ಯಾ ತಾಂತ್ರಿಕತೆ ಮಣ್ಣುಗಳನ್ನು ಸುಧಾರಿಸಲು ಬಸಿಗಾಲುವೆಗಳನ್ನು ನಿರ್ಮಿಸಿ ಮಣ್ಣಿನ ಗುಣಮಟ್ಟವನ್ನು ಕಾಪಾಡಬಹುದು. ಸತತವಾಗಿ ಕೃಷಿ ವ್ಯವಸ್ಥೆಯಲ್ಲಿ ಉತ್ಪಾದಿಸಲಾಗುತ್ತಿರುವ ಸಸ್ಯಾವಶೇಷಗಳನ್ನು ಭೂಮಿಗೆ ಮರುಕಳಿಸುವುದರಿಂದ ಅಥವಾ ಹೊದಿಕೆ ಮಾಡುವುದರಿಂದ ಮಣ್ಣಿನ ತೆವಾಂಶ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಕಾಪಾಡಿಕೊಂಡು ಬರುವುದು. ಮಣ್ಣು ಪರೀಕ್ಷೆ ವರದಿ ಆಧಾರದ ಮೇಲೆ ರೈತರು ಬೆಳೆಗಳಿಗೆ ಸಮತೋಲನ ರಸಗೊಬ್ಬರಗಳನ್ನು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಅಂದರೆ ಮಣ್ಣಿನ ಆರೋಗ್ಯವನ್ನು ನಿರಂತರವಾಗಿ ಕಾಪಾಡಿಕೊಂಡು ಹೋಗಲು ಸಾಧ್ಯವಾಗುತ್ತದೆ.

ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಬಿತ್ತನೆಗೆ 10-15 ದಿವಸಗಳ ಪೂರ್ವದಲ್ಲಿ ಕಾಂಪೋಸ್ಟ್ ಅಥವಾ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರಗಳನ್ನು ಭೂಮಿಗೆ ಸೇರಿಸಬೇಕು. ಎರಹುಳು ಗೊಬ್ಬರವನ್ನು ಉಪಯೋಗಿಸುವುದಿದ್ದಲ್ಲಿ ಬಿತ್ತನೆಯ ಸಮಯದಲ್ಲಿ ಸಾಲುಗಳಲ್ಲಿ ಹಾಕಿ ವಿವಿಧ ಪ್ರಮಾಣದಲ್ಲಿÀ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಪೋಷಕಾಂಶಗಳ ಉಪಯೋಗದ ದಕ್ಷತೆಯು ಹೆಚ್ಚಾಗಿ ಬೆಳೆಯು ಸಮೃದ್ಧಿಯಾಗಿ ಬೆಳೆಯಲು ಅನುಕೂಲವಾಗುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನೂ ಸಹ ಕಾಪಾಡಿಕೊಳ್ಳಬಹುದು.
ಸಾವಯವ ಕೃಷಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಾವಯವ ಗೊಬ್ಬರ ತಯಾರಿಸಿಕೊಳ್ಳುವುದು ಒಂದು ಸವಾಲಿನ ಕೆಲಸ.

ಸಾಮಾನ್ಯವಾಗಿ ಸಾವಯವ ವಸ್ತುಗಳು ಸ್ವಾಭಾವಿಕವಾಗಿ ಕಳಿತು ಗೊಬ್ಬರವಾಗಲು 100 ರಿಂದ 120 ದಿನಗಳು ಬೇಕು. ಆದರೆ ವೇಸ್ಟ್ ಡಿ ಕಂಪೋಸರ್ ಬಳಸಿದರೆ 40 ದಿನಗಳಲ್ಲಿ ಗೊಬ್ಬರ ತಯಾರಿಸಬಹುದು. 1 ಎಕರೆಗೆ 200 ಲೀ. ದ್ರಾವಣವನ್ನು ಬಳಸುವುದರಿಂದ ಮಣ್ಣಿನಲ್ಲಿ ಸೂಕ್ಷ್ಮಾಣುಜೀವಿಗಳ ಪ್ರಮಾಣ ವೃದ್ಧಿಯಾಗಿ ಮಣ್ಣು ಫಲವತ್ತಾಗುವುದರ ಜೊತೆಗೆ ಆರೋಗ್ಯ ವೃದ್ದಿಸಬಹುದು.

ಮಳೆ ನೀರು ಕೊಯ್ಲು ಪದ್ದತಿ ಅಳವಡಿಸುವುದು, ಜಮೀನನ್ನು ಸಮತಲಗೊಳಿಸಿ ಹದಗೊಳಿಸುವುದು, ಕೃಷಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರಗಳು ಮತ್ತು ಸಾವಯವ ಗೊಬ್ಬರಗಳನ್ನು ಮುಂಚಿತವಾಗಿ ಸಂಗ್ರಹಿಸುವುದು, ಯಂತ್ರೋಪಕರಣಗಳನ್ನು ಬಳಸಲು ಸಿದ್ದತೆ ಮಾಡಿಕೊಳ್ಳುವುದು, ಜಾನುವಾರುಗಳ ಪಾಲನೆ ಮಾಡಲು ಸಿದ್ದತೆ ಕೈಗೊಳ್ಳುವುದು ಬಿತ್ತನೆ ಮತ್ತು ಮೇವಿನ ಬೀಜಗಳ ಲಭ್ಯತೆ, ಕಳೆ, ರೋಗ, ಕೀಟ ಮತ್ತು ನೀರಿನ ನಿರ್ವಹಣೆಗಾಗಿ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ವಿವಿಧ ಬೆಳೆಗಳ ತಂತ್ರಜ್ಞಾನಗಳನ್ನು ವಿಜ್ಞಾನಿಗಳೊಂದಿಗೆ ಚರ್ಚಿಸಿ ಸೂಕ್ತವಾದ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕವಾಗಿ ಮತ್ತು ವ್ಯವಸ್ಥಿತವಾಗಿ ಬೇಸಾಯ ಕ್ರಮಗಳನ್ನು ಕೈಗೊಳ್ಳುವುದರಿಂದ ಕಡಿಮೆ ಖರ್ಚು ಮತ್ತು ಹೆಚ್ಚಿನ ಇಳುವರಿಯ ಜೊತೆಗೆ ಉತ್ತಮ ಆದಾಯವನ್ನು ಪಡೆಯಬಹುದು.

ಲೇಖಕರು: ಡಾ. ಶ್ರೀನಿವಾಸ ಬಿ.ವಿ., ಡಾ. ರಾಜು ಜಿ. ತೆಗ್ಗಳ್ಳಿ ಮತ್ತು ಡಾ. ಯುಸುಫ್‍ಅಲಿ ನಿಂಬರಗಿ, ವಿಜ್ಞಾನಿಗಳು,
ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here