ದಿ/ನಡ್ಜ್ ಸಂಸ್ಥೆಯ ಲಾಭ ಪಡೆದುಕೊಳ್ಳಿ; ಪಶು ವೈದ್ಯಾಧಿಕಾರಿ ರೇವಣಸಿದ್ಧಪ್ಪ 

1
97

ಆಳಂದ: ಇಂದು ಆಳಂದ ತಾಲೂಕಿನ ಮಟಕಿ ಗ್ರಾಮದಲ್ಲಿ ದಿ/ನಡ್ಜ್ ಸಂಸ್ಥೆ ಹಾಗೂ ಪಶುಸಂಗೋಪನ ಇಲಾಖೆ ಸಹಯೋಗದೊಂದಿಗೆ 40 ಅತಿ ಕಡು ಬಡತನದಿಂದ ಕೂಡಿರುವ ಕುಟುಂಬಗಳ 80 ಆಡುಗಳಿಗೆ ಡಿ ವರ್ಮಿಂಗ್ ಹಾಗೂ ವ್ಯಾಕ್ಸಿನೇಷನ್ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ತಾಲೂಕಿನ ಹಿರಿಯ ಪಶು ವೈದ್ಯಾಧಿಕಾರಿಗಳಾದ ರೇವಣಸಿದ್ದಪ್ಪನವರು ಚಾಲನೆ ಕೊಟ್ಟು ಮಾತನಾಡಿದರು. ಅವರು ತಮ್ಮ ಮಾತುಗಳಲ್ಲಿ ಆಡುಗಳಿಗೆ ಕಾಲಕ್ಕೆ ತಕ್ಕಂತೆ ವ್ಯಾಕ್ಸಿನೇಷನ್ ಮಾಡಿಸಬೇಕು, ಅವುಗಳಿಗೆ ಉತ್ತಮವಾದ ಆಹಾರ ನೀಡಬೇಕು. ಆಡುಗಳಿಗೆ ರೋಗ ಬರದಂತೆ ಎಚ್ಚರ ವಹಿಸಬೇಕು, ಸರಿಯಾಗಿ ನೋಡಿಕೊಂಡರೆ ಉತ್ತಮವಾದ ಲಾಭ ಕೊಡಲಿವೆ ಎಂದರು. ದಿ/ನಡ್ಜ್ ಸಂಸ್ಥೆಯು ಕಡು ಬಡತನ ನಿರ್ಮೂಲನೆ ಕಾರ್ಯಕ್ರಮದಲ್ಲಿ ಮಟಕಿ ಗ್ರಾಮದ ಒಟ್ಟು 40 ಕುಟುಂಬಗಳಿಗೆ ಆಡುಗಳನ್ನು ನೀಡಿದ್ದು, ಅವುಗಳ ಲಾಭ ಗ್ರಾಮದ ಜನತೆ ಪಡೆಯಬೇಕು ಎಂದು ಅಭಿಮತ ವ್ಯಕ್ತಪಡಿಸಿದರು.

Contact Your\'s Advertisement; 9902492681

ಪ್ರಾಸ್ತಾವಿಕವಾಗಿ ಮಾತನಾಡಿದ ದಿ/ನಡ್ಜ್ ಸಂಸ್ಥೆಯ ಕರ್ನಾಟಕದ ಆಪರೇಷನ್ ಮ್ಯಾನೇಜರ್ ವಿಶ್ವನಾಥ ಎಂ.ಕೆ. ನಡ್ಜ್ ಸಂಸ್ಥೆಯು ತನ್ನ ಗ್ರಾಮೀಣ ಅಭಿವೃದ್ಧಿಯ ಕೇಂದ್ರದ ಭೂರಹಿತ, ಸಣ್ಣ ಮತ್ತು ಅತಿ ಕಡಿಮೆ ಕೃಷಿಕ ಕುಟುಂಬಗಳಿಗೆ ಸುಸ್ಥಿರ ಜೀವನೋಪಾಯವನ್ನು ನಿರ್ಮಿಸಲು ಸಹಾಯ ಮಾಡುವ ಮೂಲಕ ಅತ್ಯಂತ ಬಡತನದಲ್ಲಿ ವಾಸಿಸುತ್ತಿರುವ ಕುಟುಂಬಗಳೊಂದಿಗೆ ಕೆಲಸ ಮಾಡುತ್ತಿದೆ. ಭೂರಹಿತ, ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯವನ್ನು ಸುಧಾರಿಸುವುದು ಗ್ರಾಮೀಣ ಜೀವನೋಪಾಯದಲ್ಲಿ ಮಹಿಳೆಯರ ಏಜೆನ್ಸಿಯನ್ನು ನಿರ್ಮಿಸಿ ಕಡುಬಡವರಿಗೆ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುತ್ತಿದೆ.

ಕಳೆದ 3 ವರ್ಷಗಳಿಂದ, 81 ಸಾವಿರಕ್ಕೂ ಹೆಚ್ಚು ಗ್ರಾಮೀಣ ಕುಟುಂಬಗಳ ಜೊತೆಗೆ ಬಡತನ ನಿರ್ಮಲನೆಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ಕಲಬುರಗಿ ಮತ್ತು ಬೀದರ ಜಿಲ್ಲೆಗಳಲ್ಲಿ ಆಳಂದ ಮತ್ತು ಔರಾದ ತಾಲೂಕಿನಲ್ಲಿ ಒಟ್ಟು 710 ಮಹಿಳಾ ಪ್ರಧಾನ ಕುಟುಂಬಗಳ ಕಡುಬಡತನ ನಿರ್ಮೂಲನಾ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಕುಟುಂಬದ ಮಹಿಳೆಯರಿಗೆ ಕುರಿ ಸಾಕಾಣಿಕೆ ಮತ್ತು ಸಣ್ಣ ವ್ಯಾಪಾರಕ್ಕೆ ಸಹಕಾರಿ ಮಾಡಿ ಅವರು ಅದರ ಮೂಲಕ ತಮ್ಮ ಬಡತನ ನಿರ್ಮೂಲೆನೆಗೆ ದಾರಿಮಾಡಿಕೊಡಲಾಗುತ್ತಿದೆ. ಇದಲ್ಲದೇ ಸರಕಾರದ ಸಹಕಾರದ ತತ್ವದಡಿಯಲ್ಲಿ ಅನೇಕ ಯೋಜನೆಳಿಗೆ ಸಂಯೋಜಿಸಿ ಉತ್ತಮ ಮತ್ತು ಸ್ವಾಭಿಮಾನದ ಬದುಕಿಗೆ ದಾರಿ ಮಾಡಿಕೊಡಲಾಗುತ್ತಿದೆ ಇದರ ಲಾಭವನ್ನು ಆಯ್ಕೆಯಾದ ಗ್ರಾಮಗಳು ಚೆನ್ನಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ಕಲಬುರಗಿ ತಂಡದ ಮುಖ್ಯಸ್ಥರಾದ ನಾಗರಾಜ್ ಮಾತನಾಡಿ ನಮ್ಮ ಸಂಸ್ಥೆಯು ಕೈಗೊಂಡಿರುವ ಬೇಸ್‌ಲೈನ್ ಸರ್ವೆಯ ಪ್ರಕಾರ ಕುಟುಂಬಗಳ ಆಯ್ಕೆ ಮಾಡಿದ್ದು, ಮೊದಲನೇ ಜೀವನೋಪಾಯ ಕುರಿಸಾಗಾಣಿಕೆ ಹಾಗೂ ಎರಡನೇ ಜೀವನೋಪಾಯ ಸಣ್ಣ ವ್ಯಾಪರವನ್ನು ಆಯ್ಕೆಯಾದ ಕಡುಬಡ ಕುಟುಂಬಗಳಿಗೆ ನೀಡಿ ಅವರ ಆದಾಯದ ಮಟ್ಟವನ್ನು ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮವು ಇನ್ನಷ್ಟು ವಿಸ್ತರಿಸಿ, ಸರಕಾರದೊಂದಿಗೆ ಸಂಯೋಜಿಸಿ ಕೆಲಸ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜೀವನೋಪಾಯ ತರಬೇತುದಾರರಾದ ಲಕ್ಷ್ಮಿ ಕುಂಬಾರ್, ಸಮುದಾಯ ಅಭಿವೃದ್ಧಿ ಅಧಿಕಾರಿಗಳಾದ ಸೋಮನಾಥ್ ವಿಠಲ್, ಮಹಾವೀರ್, ಮಲ್ಲಿಕಾರ್ಜುನ್ ದೊರೆ, ಗ್ರಾಮದ ಫಲಾನುಭವಿ ಮಹಿಳೆಯರು (ಅಕ್ಕಂದಿರು) ಹಾಗೂ ಗ್ರಾಮದ ಮುಖಂಡರು ಹಿರಿಯರು ಪಂಚಾಯತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here