ಬಿಸಿ ಬಿಸಿ ಸುದ್ದಿ

28 ರಂದು ಕಲಬುರಗಿಗೆ ರಾಹುಲ್ ಗಾಂಧಿ

ಕಲಬುರಗಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು ೩೫೭೦ ಕಿ. ಮೀ ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿಸಿದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂದಿ ಅವರು ಇದೇ ೨೮ ರಂದು ಜೇವರ್ಗಿ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಜೇವರ್ಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ.ಅಜೇಯ ಸಿಂಗ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ರಾತ್ರಿ ೯ ಗಂಟೆಗೆ ಕಲಬುರ್ಗಿಗೆ ಆಗಮಿಸಿ ತಂಗಲಿದ್ದು, ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಜೇವರ್ಗಿ ಪಟ್ಟಣದಲ್ಲಿನ ಎನ್. ಧರ್ಮಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ. ಸಿ ವೇಣುಗೋಪಾಲ, ಡಿಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಆಗಮಿಸಲಿದ್ದಾರೆ. ನಂತರ ಕೊಪ್ಪಳದ ಕುಷ್ಟಗಿ ತಾಲೂಕಿನಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ೫ ಗಂಟೆಗೆ ಬಳ್ಳಾರಿಯಲ್ಲಿ ರೋಡ್ ಶೋ ನಲ್ಲಿ ಪಾಲೊಳ್ಳಲಿದ್ದಾರೆ ಎಂದರು.

ಈ ಕಾರ್ಯಕ್ರಮವು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಜರುಗಲಿದೆ. ೪೦ ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಬಿಜೆಪಿ ಇಡೀ ರಾಷ್ಟçದಲ್ಲಿ ಹೆಸರುವಾಸಿಯಾಗಿದೆ. ಬೆಲೆ ಏರಿಕೆ ನಿರುದ್ಯೋಗ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿವೆ. ಎಲ್ಲ ಕಡೆಯ ಸರ್ವೇಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಇದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ೧೫೦ ಸ್ಥಾನಗಳಲ್ಲಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುಪಿಎ ಸರ್ಕಾರವಿದ್ದಾಗ ಗ್ಯಾಸ್ ಬೆಲೆ ರೂ.೪೫೦ ಇತ್ತು. ಆದರೆ ಬಿಜೆಪಿ ಆಡಳಿತದಲ್ಲಿ ರೂ.೧೧೫೦ಕ್ಕೆ ಏರಿಕೆಯಾಗಿದೆ. ಜನರು ಇವರ ಆಡಳಿತದಿಂದ ಬೇಸತ್ತಿದ್ದಾರೆ. ಅಲ್ಲದೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪ್ರತಿ ಮನೆಯ ಯಜಮಾನಿಗೆ ರೂ.೨೦೦೦, ಉಚಿತ ವಿದ್ಯುತ್, ಡಿಪ್ಲೋಮ ವಿದ್ಯಾರ್ಥಿಗಳಿಗೆ ರೂ.೧೫೦೦ ಹಾಗೂ ಯುವನಿದಿ ಯೋಜನೆ ಅಡಿಯಲ್ಲಿ ರೂ.೩೦೦೦ ನಿರುದ್ಯೋಗ ಭತ್ಯೆ ನೀಡುವ ಯೋಜನೆಗಳಾಗಿವೆ ಎಂದರು.

ಈ ಸಮಾವೇಶದಲ್ಲಿ ಜಿಲ್ಲೆಯ ಸುಮಾರು ೫೦ ಸಾವಿರ ಜನರು ಭಾಗಿಯಾಗಲಿದ್ದಾರೆ. ಅಲ್ಲದೇ ಜಿಲ್ಲೆಯ ೯ ಕ್ಷೇತ್ರಗಳ ಅಭ್ಯರ್ಥಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ.- ಶ್ರೀಧರ್ ಬಾಬು, ಕ.ಕ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿ.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

4 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

4 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

5 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

5 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

5 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

6 hours ago