ರಾಯಚೂರು: ಕ್ರೀಡೆಯಲ್ಲಿ ಅದರಲ್ಲೂ ಕುಸ್ತಿಯಲ್ಲಿ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 7 ಮಹಿಳಾ ಕುಸ್ತಿಪಟುಗಳು ದೆಹಲಿಯ ಸೆಂಟ್ರಲ್ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ವಿರುದ್ಧ ದೂರು ದಾಖಲಿಸಿದ್ದು, ಕೂಡಲೇ ಅಪಾದಿತನ ಮೇಲೆ ಸೂಕ್ತ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಹೆಣ್ಣು ಮಕ್ಕಳಿಗೆ ಭದ್ರತೆ ನೀಡಬೇಕೆಂದು ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿಯ ಮುಖಂಡ ರಮೇಶ್ ವಿರಾಪುರ ಆಗ್ರಹಿಸಿದ್ದಾರೆ.
ವರ್ಷದ ಹಿಂದೆ ಶುರುವಾದ ಈ ಹೋರಾಟಕ್ಕೆ ಇನ್ನೂ ನ್ಯಾಯವೇ ಸಿಕ್ಕಿಲ್ಲ, ಆತನ ಮೇಲೆ ದೂರು ದಾಖಲಿಸಿಲ್ಲ ಹಾಗೆಯೇ ಆಳುವ ಸರ್ಕಾರ ಮತ್ತು ಆಡಳಿತ ಮಂಡಳಿ ಯಾವ ಕ್ರಮವು ಕೈಗೊಂಡಿಲ್ಲ, ಬದಲಾಗಿ ಆಪಾದಿತನ ರಕ್ಷಣೆ ನಡೆಯುತ್ತಿದೆ.
ಇದು ಭ್ರಷ್ಟ ಕಾಮುಕ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಕೂಡಲೇ ಅಪಾದಿತನ ಮೇಲೆ ಸೂಕ್ತ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಹೆಣ್ಣು ಮಕ್ಕಳಿಗೆ ಭದ್ರತೆ ನೀಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ( ಎಸ್ಎಫ್ಐ ) ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸುತ್ತದೆ.
ನಮ್ಮ ಪ್ರಧಾನಿ ಮೋದಿಯವರು ಭೇಟಿ ಬಚಾವೋ – ಭೇಟಿ ಪಡಾವೋ ಎಂದು ಎಲ್ಲೆಡೆಯೂ ಹೇಳುತ್ತಾರೆ ಆದರೆ ತಮ್ಮ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ದೇಶದ ಅನೇಕ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಜೀವಂತ ಸಾಕ್ಷಿ ಇದ್ದಾಗಲೂ ಯಾವ ಕ್ರಮ ಕೈಗೊಂಡ ಉದಾಹರಣೆ ಇಲ್ಲ. ತಮ್ಮದು ಶಿಸ್ತಿನ ಪಕ್ಷ, ನಾವು ಹಣ್ಣು ಮಕ್ಕಳ ಪರ ಎಂದು ಹೇಳುತ್ತಾರೆ ಆದರೆ ಎಷ್ಟು ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಟ್ಟಿದೆ, ನ್ಯಾಯ ಕೊಡಿಸಿದೆ ? ಭಾಷಣಗಳು ಸಾಕು ಮಾಡಿ ಕ್ರಮಕ್ಕೆ ಮುಂದಾಗಬೇಕು ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಪತ್ರಿಕಾ ಹೇಳಿಕೆಯ ಮೂಲಕ ಪ್ರಶ್ನೆ ಮಾಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…