ಶಹಾಪುರ: ಬಿಜೆಪಿ ಸರಕಾರಗಳು ದುರಾಡಳಿತದೊಂದಿಗೆ ಜನರ ನಿರೀಕ್ಷೆಗಳನ್ನು ಹುಸಿಗೊಳಿಸುವ ಮೂಲಕ ಮೋಸ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿಶ್ವನಾಥರೆಡ್ಡಿ ದರ್ಶನಾಪುರ ಹೇಳಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗುರುವಾರ ಬಿಜೆಪಿ-ಜೆಡಿಎಸ್ ಪಕ್ಷ ತೊರೆದು ಹಲವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.
ಕ್ಷೇತ್ರದಲ್ಲಿ ಐದು ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ರಾಜ್ಯದಲ್ಲಿಯೇ ಶಹಾಪುರ ಮಾದರಿ ಕ್ಷೇತವಾಗಿಸಲು ಜನರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಆಶೀರ್ವದಿಸಬೇಕಿದೆ ಎಂದು ಹೇಳಿದರು.
ಮುಡಬೂಳದ ನಮ್ಮ ಪಕ್ಷದ ಹಿರಿಯ ಮುಖಂಡರಾದ ಶಂಕರಗೌಡ ಮಾಲಿಪಾಟೀಲ್ ನೇತೃತ್ವದಲ್ಲಿ ೨೦೦೪ರಲ್ಲಿ ಪಕ್ಷೇತರರಾಗಿ ಎಂಎಲ್ಎ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಭಾವಿ ಯುವ ಮುಖಂಡ ಹಣಮಂತ್ರಾಯ ಹವಲ್ದಾರ್ ಮುಡಬೂಳ ಮತ್ತು ಅವರ ತಂಡ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.
ಹಿರಿಯ ಮುಖಂಡರಾದ ಶಂಕರಗೌಡ ಮಾಲಿಪಾಟೀಲ್ ಮುಡಬೂಳ, ತಿಮ್ಮಯ್ಯ ಪುರ್ಲೆ, ಕೆಂಚಪ್ಪ ನಗನೂರು, ಬಾಬಾಪುಗೌಡ, ಪಿಡ್ಡನಾಯಕ ದೊರೆ ಸೈದಾಪುರ, ಅನಿಲಕುಮಾರ ಸಾಕರೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸೇರ್ಪಡೆಗೊಂಡ ಪ್ರಮುಖರು: ಕಾಂಗ್ರೆಸ್ ಮುಖಂಡರಾದ ವಿಶ್ವನಾಥರೆಡ್ಡಿ ದರ್ಶನಾಪುರ ಸಮ್ಮುಖ, ಪಕ್ಷದ ಹಿರಿಯ ಮುಖಂಡ ಶಂಕರಗೌಡ ಮಾಲಿ ಪಾಟೀಲ್ ನೇತ್ರತ್ವದಲ್ಲಿ ಯುವ ಮುಖಂಡ ಹಣಮಂತ್ರಾಯ ಹವಲ್ದಾರ್ ಮುಡಬೂಳ, ಆನಂದ ಹವಲ್ದಾರ್, ದೇವು ನಾಯಕ, ಮಂಜುನಾಥ ಚನ್ನಪಟ್ಟಣ ಸೇರಿದಂತೆ ಹಲವರು ನಾನಾ ಪಕ್ಷಗಳು ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…
ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಅಭಿಪ್ರಾಯ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…