ಮೇ.2ರಂದು ಕಲಬುರಗಿಯಲ್ಲಿ ಮೋದಿ ರೋಡ್ ಶೋ: ಏ.30ಕ್ಕೆ ಯೋಗಿ ಆದಿತ್ಯ ನಾಥ್ ಕಲಬುರಗಿಗೆ

ಕಲಬುರಗಿ:ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷ ತುಂಬಿದ ಸಪ೯ದ ಜೊತೆಗೆ ಹೋಲಿಸುವ ಮೂಲಕ ಕಾಂಗ್ರೆಸ್ ಪಕ್ಷ ತನ್ನ ಹಳೆ ಚಾಡಿಯನ್ನು ಮುಂದುವರೆಸಿದ್ದು, ಖಂಡಿತವಾಗಿಯೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮೂಲೆಗುಂಪು ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು.

ಶುಕ್ರವಾರ ಬೆಳಿಗ್ಗೆ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷ ಸಪ೯ಕ್ಕೆ ಹೋಲಿಸಿದ್ದು,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಪ್ರಧಾನಿಯಾಗಿ ಚುನಾಯಿತರಾದ ಮೋದಿ ಅವರನ್ನು ಕಾಂಗ್ರೆಸ್ ಯಾವ ರೀತಿ ಕಾಣುತ್ತಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ನಾಯಕರಾದ ಖಗೆ೯ಯವರು ಹಿಂದೆಯೂ ಮೋದಿಯವರನ್ನು *ರಾವಣ್* ಎಂದು ಸಂಭೋಧಿಸಿದ್ದರು. ಸೋನಿಯಾ ಗಾಂಧಿ ಕೂಡ *ಮೌತ್ ಕಾ ಸೌದಾಗರ್* ಹಾಗೂ ರಾಹುಲ್ ಗಾಂಧಿ *ಚೋರ್* ಎಂದು ಹೇಳುವ ಮೂಲಕ ದೇಶದ ಪ್ರಧಾನಿಯನ್ನು ನಿಂಧಿಸಿ,ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದೀಗ ದೇಶದ ಪ್ರಧಾನಿ ಅವರನ್ನು ವಿಷ ತುಂಬಿದ ಸಪ೯ಕ್ಕೆ ಹೋಲಿಕೆ ಮಾಡಿದ್ದು,ಈ ಎಲ್ಲಾ ವಿಷಯಗಳನ್ನು ಇಡೀ ರಾಜ್ಯದ ಜನರ ಮುಂದೆ ಇಂದಿನಿಂದಲೇ ತೆಗೆದುಕೊಂಡು ಹೋಗುತ್ತೇವೆ.ಯಾರು ವಿಷ ಸಪ೯ ಇದ್ದಾರೆ ಎಂಬುದನ್ನು ಈ ಚುನಾವಣೆಯಲ್ಲಿ ತಾವುಗಳು ತೀಮಾ೯ನ ಮಾಡಬೇಕೆಂದು ಮನವಿ ಮಾಡುತ್ತೇವೆ.ರಾಜ್ಯದಲ್ಲಿ 61 ಲಕ್ಷ ಮನೆಗಳನ್ನು ಬಡವರಿಗೆ ನೀಡಿ,ಅಪ್ಪರ ಭದ್ರಾ ಯೋಜನೆಗೆ 5300 ಕೋಟಿ ಕೊಟ್ಟು,ಕಳಸಾ ಬಂಡೂರಿ ವಿಷಯದಲ್ಲಿ ಐತಿಹಾಸಿಕ ನಿಣ೯ಯವನ್ನು ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿಯ ಹೈವೇ ಯನ್ನು ಬಿಜೆಪಿ ಸಕಾ೯ರ ನಿಮಾ೯ಣ ಮಾಡುತ್ತಿದೆ ಎಂದು ಹೇಳಿದರು.

ವೀರಶೈವ ಲಿಂಗಾಯತ ಧಮ೯ವನ್ನು ಒಡೆಯುವುದಕ್ಕೆ ಕೈ ಹಾಕಿದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರೆನೂ ಸತ್ಯ ಹರಿಶ್ಚಂದ್ರರಾ ?ಎಂದು ಪ್ರಶ್ನಿಸಿದ ಅವರು,ಪ್ರಧಾನಿ ನರೇಂದ್ರ ಮೋದಿ ಅವರ ಸ್ಥಾನ ಮಾನ ಗೌರವದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ನಿಮಗೆ ಎಷ್ಟು ಶೋಭೆ ತರುತ್ತದೆ ಎಂದು ರವಿಕುಮಾರ್ ಪ್ರಶ್ನೆ ಮಾಡಿದರು.

ಮೇ.2ರಂದು 6 ಕಿ.ಮೀ. ಮೋದಿ ರೋಡ್ ಶೋ: ಮುಂಬರುವ ಮೇ.2ರಂದು ಕಲಬುರಗಿ ನಗರದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 6 ಕೀ.ಮೀ.ಕಲರ್ ಪುಲ್ ರೋಡ್ ಶೋ ಹಮ್ಮಿಕೊಳ್ಳಲಾಗಿದ್ದು,ನಗರದ ಕೆ.ಎಂ.ಎಫ್.ರಸ್ತೆಯಿಂದ ಕಲಬುರಗಿ ನಗರದ ಬಸ್ ನಿಲ್ದಾಣದ ವರೆಗೆ ರೋಡ್ ಶೋ ಆಯೋಜನೆ ಮಾಡಲಾಗಿದೆ. ಈ ರೋಡ್ ಶೋ, ನೋಡಲು ಕಲಬುರಗಿ ಜಿಲ್ಲೆಯ ಉತ್ತರ,ದಕ್ಷಿಣ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಅತೀ ಜನರು ಆಗಮಿಸಲಿದ್ದು,ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರದ ಜನರು ಕೂಡ ಬರಲಿದ್ದಾರೆ ಎಂದು ಹೇಳಿದರು.

ಏ.30 ರಂದು ಯೋಗಿ ಆದಿತ್ಯ ನಾಥ್ ಕಲಬುರಗಿಗೆ:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಆಗಮಿಸಲಿದ್ದು, ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ ಹಾಗೂ ಚಿತ್ತಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಸಾವ೯ಜನಿಕ ಸಭೆಯಲ್ಲಿ ಭಾಗವಹಿ‌ಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಹುಸಿ ಭರವಸೆಗಳನ್ನು ಜನರು ನಂಬಲು ಹೋಗುವುದಿಲ್ಲ. ಸುಳ್ಳು ಭರವಸೆ ನೀಡುತ್ತಿರುವ ಕಾಂಗ್ರೆಸ್ ಎಲ್ಲವನ್ನೂ ಹೇಗೆ ಉಚಿತವಾಗಿ ನೀಡುತ್ತಿರಾ ಎಂಬುದರ ಬಗ್ಗೆ ಚಚೆ೯ಗೆ ಬನ್ನಿ. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಡಬಲ್ ಇಂಜಿನ್ ಸಕಾ೯ರದಿಂದ ರಾಜ್ಯದಲ್ಲಿ ಅಭಿವೃದ್ಧಿ ಹೈವೇ ನಿಮಾ೯ಣವಾಗಲಿದೆ.

ಸುದ್ದಿಗೋಷ್ಠಿಯಲ್ಲಿ ವೆಂಕಟಪ್ರಸಾದ್ ಮಾಲೇಪಾಟಿ, ನಾಗರಾಜ್ ಮಹಾಗಾಂವಕರ್, ಬಾಬುರಾವ್ ಹಾಗರಗುಂಡಗಿ, ಸಂತೋಷ್ ಹಾದಿಮನಿ ಉಪಸ್ಥಿತರಿದ್ದರು.

emedialine

Recent Posts

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

37 mins ago

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

2 hours ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

3 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

3 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

17 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420