ಕಲಬುರಗಿ: ಜಿಲ್ಲೆಯ ಜೇರ್ವಗಿ ಪಟ್ಟಣದ ಸಾರ್ವಜನಿಕ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಬೃಹತ್ ಸಮಾವೇಶದ ಆರಂಭದಲ್ಲೆ ಭಾರಿ ಮಳೆ ಅಡ್ಡಿಯಾಗಿದೆ.ಗುಡುಗು ಸಿಡಿಲಿನ ಆರ್ಭಟದ ಮಧ್ಯೆಯೂ ಜನ ರಾಹುಲ್ ಗಾಗಿ ಕಾದು ನಿಂತಿದ್ದಾರೆ.
ಹವಾಮಾನ ವೈಪರೀತ್ಯ ದಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಳಗ್ಗೆ ನಿಗಧಿತ ಸಮಯದಲ್ಲಿ ಕಾರ್ಯಕ್ರಮ ಸ್ಥಳಕ್ಕೆ ಬರಲಾಗಲಿಲ್ಲ. ಮಂಗಳೂರಿನಿಂದ ಬೆಳಗ್ಗೆ ೧೨ ಗಂಟೆಗೆ ವಮಾನದ ಮುಖೇನ ಕಲಬುರಗಿ ವೇಳೆ ಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಅಲ್ಲಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಜೇವರ್ಗಿ ಬರಬೇಕೆಂದರೆ ಮೋಡ ಕವಿದು ಸಾಧ್ಯವಾಗಲಿಲ್ಲಿ. ಇದೇ ವೇಳೆ ಜೇವರ್ಗಿ ಯಲ್ಲಿ ಭಾರಿ ಮಳೆ ಬೀಳಲಾರಂಭಿಸಿದೆ. ಪ್ರಯುಕ್ತ ಅವರನ್ನು ರಸ್ತೆ ಮೂಲಕ ಕರೆ ತರಯವ ಯತ್ನ ನಡೆದಿದೆ.
ಕಾಂಗ್ರಸ್ ಯುವರಾಜನ ನೋಡಲು ಜನರು ಜಡಿವ ಮಳೆ ಮಧ್ಯೆ ಕಾತುರದಿಂದ ಕಾಯುತ್ತಿದ್ದರೆ. ಈ ಸುರಿವ ಮಳೆಯಲ್ಲಿ ಕಾಯುತ್ತಿರುವ ಜನರನ್ನು ಉದ್ದೇಶಿಸಿ ಮಾತನಾಡಿದ ಅಭ್ಯರ್ಥಿ ಡಾ.ಅಜಯಸಿಂಗ್ ಮಾತನಾಡಿ ಮಳೆ ಒಳ್ಳೆಯ ಸಂಕೇತ. ರೈತರಿಗೆ ಸುಭ ಸೂಚನೆ.
ಇದರೊಂದಿಗೆ ರಾಜ್ಯವನ್ನಾಳಿದ ಭ್ರಷ್ಟ ಸರಕಾರವನ್ನು ಕಿತ್ತೊಗೆಯಲು ವೇದಿಕೆಯೂ ಆಗಲಿದೆ. ಇದೇ ವೇಳೆ ಬಿ.ಆರ್.ಪಾಟೀಲ, ಡಾ.ಶರಣಪ್ರಕಾಶ ಪಾಟೀಳ, ಕನೀಜ್ ಫಾತಿಮಾ, ಎಂ.ವೈ.ಪಾಟೀಲ, ಸುಭಾಷ್ ರಾಠೋಡ್, ತಿಪ್ಪಣ್ಣಪ್ಪ ಕಮಕನೂರು ಮಾತನಾಡಿದರು. ಗುಡುಗು ಸಹಿತ ಭಾರಿ ಮಳೆ ಬೀಳುತ್ತಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…