ಕಲಬುರಗಿ: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭ್ರಷ್ಟ ಹಾಗೂ ಕಳ್ಳರ ಸರ್ಕಾರ ಎಂದು ಎಐಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಜೇವರ್ಗಿ ಪಟ್ಟಣದ ಡಾ. ಧರ್ಮಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶೇ. 40 ಕಮಿಷನ್ ಸರ್ಕಾರಕ್ಕೆ ಬಹುಶಃ 40 ನಂಬರ್ ಬಹಳ ಪ್ರಿಯವಾಗಿರಬಹುದು ಅಂತ ಕಾಣುತ್ತೆ. ಹೀಗಾಗಿ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನ ಮಾತ್ರ ತಂದು ಕೊಡಿ ಎಂದರು.
ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಗೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಲಭಿಸಲಿದೆ. ಏಕೆಂದರೆ ಜನತೆಯ ಆಶೀರ್ವಾದ ಈ ಬಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
371ನೇ ಕಲಂ ಜಾರಿಗಾಗಿ ಈ ಹಿಂದೆ ಬಿಜೆಪಿಯ ಎಲ್.ಕೆ. ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ವ್ಯಕ್ತಪಡಿಸಿದ್ದರು. ನಮ್ಮ ಸರ್ಕಾರ ಬಂದ ಮೇಲೆ ಸಂವಿಧಾನಕ್ಕೆ ತಿದ್ದುಪಡಿ ತಂದು ಇಡೀ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನುಕೂಲ ಕಲ್ಪಿಸಲಾಯಿತು. ಇಂಜಿನಿಯರ್ಸ್, ನರ್ಸ್, ಡಾಕ್ಟರ್ ಉದ್ಯೋಗಗಳನ್ನು ಸೃಷ್ಟಿ ಮಾಡಲಾಯಿತು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಲಾದ 3000 ಕೋಟಿ ರೂ. ಅನುದಾನದಲ್ಲಿ ಶೇ. 12ರಷ್ಟು ಮಾತ್ರ ಬಳಕೆಯಾಗಿರುವುದು ಬಿಜೆಪಿ ಆಡಳಿತದ ವೈಖರಿಗೆ ಹಿಡಿದ ಕನ್ನಡಿಯಾಗಿದೆ. ಖಾಲಿ ಇರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಖಾಲಿ ಇರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಲ್ಲದೆ ಈ ಭಾಗವನ್ನು ವಿಶೇಷ ಶೈಕ್ಷಣಿಕ ವಿಭಾಗವನ್ನಾಗಿಸಲು ಐಐಟಿ, ಐಎಎಂ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೆಕೆಆರ್ಡಿಬಿಗೆ 5000 ಕೋಟಿ ರೂ. ಅನುದಾನ ನೀಡಲಾಗುವುದು. ಪ್ರತಿ ಗ್ರಾಪಂಗೆ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ, 200 ಯುನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಸಂಚಾರ ಘೋಷಣೆ ಮಾಡಲಾಗಿದ್ದು, ಖಂಡಿತ ಇವು ಗ್ಯಾರಂಟಿ ಯೋಜನೆಗಳು ಎಂದು ವಿವರಿಸಿದರು.
ಕಾಂಗ್ರೆಸ್ ಪಕ್ಷದ ನಮ್ಮ ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಆದಿಯಾಗಿ ಬಿಜೆಪಿಯವರು ಈ ಯೋಜನೆಗಳನ್ನು ಜಾರಿಗೆ ತರುವುದು ಆಗುವುದಿಲ್ಲ ಎಂದು ಟೀಕಿಸುತ್ತಿದ್ದಾರೆ. ಆದರೆ ಇದು ಅವರಿಗೆ ಅಸಾಧ್ಯವಾದ ಕೆಲಸ. ಯಾಕೆಂದರೆ ಅವರು ಶೇ.40 ಪರ್ಸೆಂಟೇಜ್ ಸರ್ಕಾರ ಎಂದು ಕುಟುಕಿದರು.
ನಮ್ಮಸರ್ಕಾರ ಬಂದರೆ, ಬಡವರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ, ಸಣ್ಣ ವ್ಯಾಪಾರಸ್ಥರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…