ಕಲಬುರಗಿ: ಸಂವಿಧಾನದ ಉಳುವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಎಂ. ಹೊಸಮನಿ ತಿಳಿಸಿದರು.
ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ರಾಜ್ಯ ಸರ್ಕಾರ ಒಳ ಮೀಸಲಾತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ರಾಜಕೀಯ ಗಿಮಿಕ್ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದಾಗ 50 ವಾಹನಗಳ ಮಂಜೂರಾತಿ ಆಗಿದ್ದವು. ಈಗ ಕೇವಲ 2 ಕೂಡ ಆಗುತ್ತಿಲ್ಲ. ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ದೊರೆಯುತ್ತಿಲ್ಲ ಎಂದು ಆಪಾದಿಸಿದರು.
ಚಿತ್ತಾಪುರ ಮತಕ್ಷೇತ್ರದಲ್ಲಿ ಈ ಬಾರಿ ಪ್ರಿಯಾಂಕ್ ಖರ್ಗೆ ಅವರ ಹವಾ ಜೋರಾಗಿದೆ. ರೌಡಿ ಶೀಟರ್ ಮಣಿಕಂಠ ಅವರಿಗೆ ಟಿಕೆಟ್ ನೀಡಿರುವುದು ಬಿಜೆಪಿ ಪಕ್ಷದ ಧೋರಣೆ ತಿಳಿಸಿಕೊಡುತ್ತದೆ. ಅಭಿವೃದ್ಧಿ ನೋಡಿ ಜನ ಮತ ಹಾಕಬೇಕು ಎಂದರು.
ಮಿಲಿಂದ ಸನಗುಂದಿ, ಭರತ್ ಬುಳ್ಳಾ, ಕಾಶಿನಾಥ ದೀವಟಗಿ, ರಮೇಶ, ಸಿ.ಎಚ್. ನಗನೂರ ಇತರರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…