ಸುರಪುರ: ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆ ದಿನ ಚುನಾವಣೆ ಕರ್ತವ್ಯಕ್ಕೆ ಆಗಮಿಸುವ ಭೂತ್ ಮಟ್ಟದ ಅಧಿಕಾರಿಗಳಿಗೆ ಅಡುಗೆ ಮಾಡಲು ಕಾಂಟಿಜೆನ್ಸ್ ಹಣವನ್ನು ನೀಡಬೇಕೆಂದು ಆಗ್ರಹಿಸಿ ತಹಸೀಲ್ದಾರಗೆ ಮನವಿ ಸಲ್ಲಿಸಲಾಗಿದೆ.
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅನೇಕ ಮುಖಂಡರು ಮನವಿಯನ್ನು ಸಲ್ಲಿಸಿ,ಚುನಾವಣೆ ದಿನ ಮತ್ತು ಅದರ ಹಿಂದಿನ ದಿನ ಎರಡು ದಿನಗಳ ಕಾಲ ಅಡುಗೆ ಮಾಡಲು ಕಾಂಟಿಜೆನ್ಸ್ ಭತ್ಯೆ ನೀಡಬೇಕು,ಇಲ್ಲವಾದಲ್ಲಿ ನಾವು ಅಡುಗೆ ಕೆಲಸಕ್ಕೆ ಹೋಗುವುದಿಲ್ಲ,ನಮ್ಮ ಹೆಸರಲ್ಲಿ ಖರ್ಚು ಹಾಕಲಾಗಿರುತ್ತದೆ ಆದರೆ ನಮಗೆ ಆ ಹಣ ನೀಡಿರುವುದಿಲ್ಲ.ಆ
ದ್ದರಿಂದ ಈಬಾರಿಯ ಚುನಾವಣೆ ಸಮಯದಲ್ಲಿ ಅಡುಗೆ ಕೆಲಸಕ್ಕೆ ಬರುವ ಎಲ್ಲ ಅಕ್ಷರ ದಾಸೋಹ ನೌಕರರಿಗೆ ಭತ್ಯೆ ನೀಡುವಂತೆ ಆಗ್ರಹಿಸಿ ಗ್ರೇಡ-2 ತಹಸೀಲ್ದಾರರಿಗೆ ಮತ್ತು ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಮೌನೇಶ ಕಂಬಾರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಸೌಭಾಗ್ಯ ಮಾಲಗತ್ತಿ, ಶಹಾಜೀದಿ ಬೇಗಂ,ಪ್ರಕಾಶ ಆಲ್ಹಾಳ ಇದ್ದರು.
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…