ಯಡ್ರಾಮಿ: ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರ ಪರ ಪ್ರಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೇ. 1ರಂದು ಆಗಮಿಸಲಿದ್ದಾರೆ.
ಪಟ್ಟಣದ ಯುಕೆಪಿ ಗ್ರೌಂಡ್ ಆವರಣದಲ್ಲಿ ಹೆಲಿಪ್ಯಾಡ್ ಇಳಿಸಲು ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 2ಗಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದು ಹೈಸ್ಕೂಲ್ ಪಕ್ಕದಲ್ಲಿ ಗಂಗಯ್ಯ ಅವರ ಹೊಲದ ವಿಶಾಲವಾದ ಜಾಗದಲ್ಲಿ ವೇದಿಕೆ ನಿರ್ಮಿಸಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಶಾಸಕ ಬಂಡೆಪ್ಪ ಖಾಸೆಂಪುರ ಸೇರಿ ಹಲವು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಜೇವರ್ಗಿ ಮತ್ತು ಯಡ್ರಾಮಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.