ಗಂಗಾಕಲ್ಯಾಣ‌ ಯೋಜನೆಯಲ್ಲಿ BJPಯಿಂದ 500 ಕೋಟಿ ಭ್ರಷ್ಟಾಚಾರ: ಪ್ರಿಯಾಂಕ್ ಖರ್ಗೆ ಆರೋಪ

0
33

ಕಲಬುರಗಿ: ರಾಜ್ಯ ಸರ್ಕಾರ ಅಭಿವೃದ್ದಿ ಕಾರ್ಯ ಕೈಗೊಳ್ಳುವಲ್ಲಿ ವಿಫಲವಾಗಿದ್ದು, ಭ್ರಷ್ಟಾಚಾರ ತಾರಕ್ಕಕ್ಕೇರಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಸಂಕನೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದ ಅವರು ಗಂಗಾ ಕಲ್ಯಾಣ ಯೋಜನೆಯಲ್ಲಿ ಬಿಜೆಪಿ ಸರ್ಕಾರ ಬಡವರ ಜಮೀನುಗಳಲ್ಲಿ ಬೋರ್ ವೆಲ್ ಕೊರೆಸುವ ಬದಲು ಸುಮಾರು 500 ಕೋಟಿ ಅವ್ಯವಹಾರ ಮಾಡಿದೆ. ಭ್ರಷ್ಟಾಚಾರಕ್ಕೆ ತೀಲಾಂಜಲಿ ಇಡಬೇಕಾದರೆ ನೀವೆಲ್ಲ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

Contact Your\'s Advertisement; 9902492681

ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂದು ಘೋಷಿಸಿದ ಪ್ರಿಯಾಂಕ್ ಖರ್ಗೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನಿಗೆ ಕ್ರಿಮಿನಲ್‌ ಹಿನ್ನೆಲೆ ಇದೆ. ಅವನು ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ. ಅಂತವನನ್ನು ಬಿಜೆಪಿ ಶಾಸಕನನ್ನಾಗಿ ಮಾಡ ಹೊರಟಿದೆ. ನೀವೆಲ್ಲ ಸೇರಿ ಅವರಿಗೆ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಭಾಗನಗೌಡ ಸಂಕನೂರು, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here