ಬಿಸಿ ಬಿಸಿ ಸುದ್ದಿ

ಗೃಹ ಇಲಾಖೆ ಬಿಜೆಪಿ ಅಭ್ಯರ್ಥಿ ಬಗ್ಗೆ ಆರೋಪಿಸಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನಿಗೆ ಅಕ್ಕಿ ಕಳ್ಳ, ಡಿಸೇಲ್ ಕಳ್ಳ ಹಾಗೂ ಹಾಲಿನ ಪುಡಿ ಕಳ್ಳತನ ಮಾಡಿ ಮಾರಾಟ ಮಾಡುತ್ತಾನೆ ಎಂದು ನಾನು ಅಥವಾ ಕಾಂಗ್ರೆಸ್ ನವರು ಹೇಳಿಲ್ಲ. ಹೇಳಿದ್ದು ಬಿಜೆಪಿ ಸರ್ಕಾರದ ಗೃಹ ಇಲಾಖೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.

ದಿಗ್ಗಾಂವ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಅವರು ಮಾತನಾಡಿ ಹಾಲಿನ ಪುಡಿ ಅಕ್ರಮ ಮಾರಾಟ ಮಾಡಿದ ಆರೋಪ ಸಾಬೀತಾಗಿ ಯಾದಗಿರಿ ನ್ಯಾಯಾಲಯ ‌ಒಂದು‌ ವರ್ಷ ಜೈಲು ಶಿಕ್ಷೆ ಕೂಡಾ ವಿಧಿಸಿದೆ. ಚಿತ್ತಾಪುರದ ಅಭಿವೃದ್ದಿಯಾಗಬೇಕಾದರೆ ನಿಮ್ಮ ಮಕ್ಕಳ ಶೈಕ್ಷಣಿಕ ಉನ್ನತಿಯಾಗಬೇಕಾದರೆ ನನಗೆ ಮತ ನೀಡಿ ನಿಮ್ಮ ಮಕ್ಕಳು ಮಣಿಕಂಠನಂತೆ ಆಗಬೇಕೆಂದರೆ ಅವನಿಗೆ ಮತ ಹಾಕಿ ಎಂದರು.

ಮೊನ್ನೆ ಯುಪಿ ಸಿಎಂ ಯೋಗಿ ಆದಿತ್ಯನಾಥ ಬಂದು ಚಾವಲ್ ಚೋರ್ ನ ಪರ ಮತಯಾಚನೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಪ್ರಧಾನಿ‌ ಹಾಗೂ ಮಧ್ಯಪ್ರದೇಶ ಸಿಎಂ ಬರಬೇಕಿತ್ತು. ಯಾಕೋ ಅವರು ಬರುವುದು ರದ್ದಾಗಿದೆ ಎಂದರು.

ಬರ ನೆರೆ ಬಂದಾಗ ತೊಗರಿಗೆ ನೆಟೆ ರೋಗ ಬಂದಾಗ ಬರದ ಸಿಎಂ ಬೊಮ್ಮಾಯಿ ಅಕ್ಕಿ ಕಳ್ಳನ ಪರ ಮತಯಾಚನೆ ಮಾಡಲು ಬಂದಿದ್ದಾರೆ‌ ಇದು ದುರಂತ.

ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂದು ಘೋಷಿಸಿದ ಅವರು ಇನ್ನೇನು ಒಂದು ವಾರದಲ್ಲಿ ‌ಚುನಾವಣೆ ಮುಗಿಯಲಿದೆ. ಕಾಂಗ್ರೆಸ್ ಪಕ್ಷ 130 ಕ್ಕೂ ಹೆಚ್ಚು ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬಂದು ಅಭಿವೃದ್ದಿ ಮಾಡಲಾಗುವುದು. ವಿಧಾನಸೌಧದಲ್ಲಿ ಗುಡುಗಬೇಕೆಂದರೆ ನೀವು ಪ್ರಿಯಾಂಕ್ ನಿಗೆ ಮತನೀಡಿ‌ ಎಂದು ಮನವಿ ಮಾಡಿದರು.

ಪಿಎಸ್ ಐ, ಎಇಇ, ಜೆಇ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ರಾಜ್ಯದ ಇತಿಹಾಸದಲದಲೇ ಮೊದಲ ಬಾರಿಗೆ ಹಾಗೂ ಐಪಿಎಸ್ ಅಧಿಕಾರಿಗಳು ಜೈಲಿಗೆ ಹೋಗಿದ್ದಾರೆ.

ಇಡೀ ತಾಲೂಕಿನಲ್ಲೇ ದಿಗ್ಗಾಂವ ಗ್ರಾಮ‌ ಅತಿ ಹೆಚ್ಚು ಲೀಡ್ ಕೊಡುತ್ತೇವೆ ಎಂದು ಜನರು ಕೂಗಿ ಹೇಳಿದರು.‌ ಇದಕ್ಕೆ ಪ್ರತಿಯಾಗಿ ಮಾತನಾಡಿದ ಪ್ರಿಯಾಂಕ್, ನೀವು ಹೆಚ್ಚಿನ ಬಹುಮತದಿಂದ ಆರಿಸಿ ಕಳಿಸಿದರೆ ಹೆಚ್ಚಿನ ಅನುದಾನ ತರುತ್ತೇನೆ, ಅಭಿವೃದ್ದಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ವೇದಿಕೆಯ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಸೇರಿದಂತೆ ಹಲವರಿದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago