ಕಲಬುರಗಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕ್ ವಾದ್ರಾ ಪಕ್ಷದ ಅಭ್ಯರ್ಥಿಗಳ ಪರ ಬುಧವಾರ ಸಂಜೆ ನಗರದಲ್ಲಿ ರೋಡ್ ಶೋ ನಡೆಸಿದರು.
ಕಣ್ಣು ಮುಚ್ಚಿ ಕನಸು ಕಾಣುತ್ತಿರುವ ಮೋದಿಯವರೆ, ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಮ್ಮಕಣ್ಣಿಗೆ ಬೀಳುತ್ತಿಲ್ಲವೇ? ಕೃಷಿ ಕೂಲಿ ಕಾರ್ಮಿಕರು, ಮಹಿಳೆಯರು ಸಂಘರ್ಷ ಎದುರಿಸುತ್ತಿದ್ದಾರೆ. ಇವುಗಳಿಗೆ ನೀವು ಉತ್ತರ ಕೊಡಲೇಬೇಕು, ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಭಾಗ್ಯಗಳನ್ನು ಕೊಟ್ಟಿದೆ. ವಿಕಾಸದ ಹೆಸರಿನಲ್ಲಿ, ಪ್ರದೇಶದ ಹೆಸರಿನಲ್ಲಿ ಎಲ್ಲರನ್ನು ಒಡೆದು ಆಳಿದ್ದಾರೆ ಎಂದು ದೂರಿದರು
ನೆಹರೂ ಗಂಜ್ ಬಳಿ ಇರುವ ನಗರೇಶ್ವರ ಶಾಲೆಯಿಂದ ಕಿರಾಣಾ ಬಜಾರ್, ಚೌಕ್ ಪೊಲಿಸ್ ಠಾಣೆ, ಸೂಪರ್ ಮಾರ್ಕೆಟ್ ಮೂಲಕ ಮೂಲಕ ತೆರೆದ ವಾಹನದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರತ್ತ ಕೈ ಬೀಸುತ್ತ ಜಗತ್ ವೃತ್ತದವರೆಗೆ ತಲುಪಿದರು.
ದಾರಿಯುದ್ದಕ್ಕೂ ಗೊಂಬೆ ಕುಣಿತ, ಪಕ್ಷದ ಧ್ವಜ ಹಿಡಿದ ಯುವಕರು, ಡೊಳ್ಳು, ಹಲಗೆ ಕುಣಿತ, ಲಂಬಾಣಿ ನೃತ್ಯ ಸೇರಿದಂತೆ ವಿವಿಧ ಕಲಾ ತಂಡಗಳು ಅವರನ್ನು ಸ್ವಾಗತಿಸಿದರು.
ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಗಾಂಧಿ, ಶೇ. 40 ಪರ್ಸೆಂಟೇಜ್ , ಪಿಎಸ್ಐ ನೇಮಕಾತಿ ಹಗರಣ ಸೇರಿದಂತೆ ಸಾಕಷ್ಟು ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯ ಸರ್ಕಾರ ಹಾಗೂ ಚುನಾವಣಾ ಪ್ರಣಾಳಿಕೆಯನ್ನೇ ಈಡೇರಿಸದ ಕೇಂದ್ರ ಸರ್ಕಾರ ಬಿಜೆಪಿ ಪಕ್ಷದ ದುರಾಡಳಿತವನ್ನು ಖಂಡಿಸಿದರು.
ಸಿಲೆಂಡರ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜಿಎಸ್ ಟಿ, ನೋಟ್ ಬಂದಿಯಿಂದ ಬಡವರು, ವ್ಯಾಪರಸ್ಥರು, ಮಧ್ಯಮವರ್ಗದವರು ಸೇರಿದಂತೆ ಈ ದೇಶದ ಜನರು ರೋಸಿ ಹೋಗಿದ್ದು, ಕೃಷಿ, ಕೂಲಿಕಾರರು ಹಾಗೂ ರೈತಾಪಿ ವರ್ಗದವರು ಬಳಲಿ ಬೆಂಡಾಗಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.
ಭಾಷಣದ ಆರಂಭದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸ್ಮರಿಸಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಧರ್ಮಸಿಂಗ್ ಮುಂತಾದವರ ಶ್ರಮದಿಂದಾಗಿ 371 ( ಜೆ) ತಿದ್ದುಪಡಿ, ಸಿಯುಕೆ, ಇಎಸ್ಐ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ಆಶಾದಾಯಕವಾಗಿ ಕಾಣುತ್ತಿವೆ ಎಂದರು.
ಅಹ್ಮದ್ ಪಟೇಲ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಡಾ. ಅಜಯಸಿಂಗ್, ಕನೀಜ್ ಫಾತಿಮಾ, ಡಾ. ಶರಣಪ್ರಕಾಶ ಪಾಟೀಲ ಅಲ್ಲಮಪ್ರಭು ಪಾಟೀಲ, ಜಿಲ್ಲಾಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಸುಭಾಷ ರಾಠೋಡ್ ಇತರರು ಇದ್ದರು.
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…
ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…