ಬಿಸಿ ಬಿಸಿ ಸುದ್ದಿ

ಗಂಗಾವತಿವತಿಯಲ್ಲಿ ಜನರ ಸಹಾಯಕ್ಕೆ ವಿನೋತನ “ವಾಲ್‌ ಆಫ್‌ ಕೈಂಡ್‌ ನೆಸ್ “

ಮರಿಗೌಡ ಬಾದರದಿನ್ನಿ

ಗಂಗಾವತಿ: ಬಡವರು, ನಿರ್ಗತಿಕರ ನೆರವಿಗೆ ಮುಂದಾಗಿರುವ ಇಲ್ಲಿನ ಗೆಳೆಯರ ಬಳಗ‌, ‘ವಾಲ್‌ ಆಫ್‌ ಕೈಂಡ್‌ನೆಸ್‌’ ಮೂಲಕ ಸಹಾಯಹಸ್ತ ಚಾಚಿದೆ.

ನಗರದ ಕೋರ್ಟ‌ ಹತ್ತಿರ ‘ ವಾಲ್‌ ಆಫ್‌ ಕೈಂಡ್‌ ನೆಸ್ ’ ಹೆಸರಿನಲ್ಲಿ ಬಾಕ್ಸ್‌ ರೂಪದ ಸೆಲ್ಫ್‌ಗಳನ್ನು ನಿರ್ಮಿಸಿದೆ. ಅದರಲ್ಲಿ ಯಾರು ಬೇಕಾದರೂ ಬಟ್ಟೆ, ಪಾತ್ರೆ ಸಾಮಾನು ಸೇರಿದಂತೆ ಇತರೆ ದೈನಂದಿನ ಉಪಯೋಗದ ವಸ್ತುಗಳನ್ನು ಇಟ್ಟು ಹೋಗಬಹುದು.

ಈ ವಿನೂತನ ಕೆಲಸ ಆರಂಭಿಸಿದ್ದು, ಪ್ರಾರಂಭದಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲವರು ಹಳೆಯ ಬಟ್ಟೆ, ಪಾತ್ರೆ ಸಾಮಾನು ಸೇರಿದಂತೆ ಇತರೆ ವಸ್ತುಗಳನ್ನು ಬಳಸದೆ ಮನೆಯ ಒಂದು ಕೋಣೆಯಲ್ಲಿ ಹಾಗೆಯೇ ಇಟ್ಟಿರುತ್ತಾರೆ. ಅವುಗಳು ಅಲ್ಲೇ ಧೂಳು ತಿನ್ನುತ್ತ ಹಾಳಾಗುತ್ತಿರುತ್ತವೆ. ಮತ್ತೆ ಕೆಲವರು, ಬಹಳ ಕಡಿಮೆ ಬೆಲೆಗೆ ಗುಜರಿಗೆ ಹಾಕುತ್ತಾರೆ. ಹೀಗೆ ಮಾಡುವ ಬದಲು ಅವುಗಳನ್ನು ‘ವಾಲ್‌ ಆಫ್‌ ಕೈಂಡ್‌ನೆಸ್‌’ ಪೆಟ್ಟಿಗೆಯಲ್ಲಿ ಹಾಕಿ ಹೋದರೆ, ಬಡವರು, ನಿರ್ಗತಿಕರು ಹಾಗೂ ಅನಾಥಾಶ್ರಮದಲ್ಲಿ ಇರುವವರಿಗೆ ಅನುಕೂಲವಾಗುವುದಲ್ಲದೆ ಅವರಿಗೆ ನೆರವಿನ ಹಸ್ತ ಚಾಚಿದಂತಾಗುತ್ತದೆ. ಎಲ್ಲ ದಿನ ಯಾರು ಬೇಕಾದರೂ ಬಂದು ವಸ್ತುಗಳನ್ನು ಇಟ್ಟು ಹೋಗಬಹುದು. ಭಿಕ್ಷುಕರು ನಿರ್ಗತಿಕರು ಸೇರಿದಂತೆ ಯಾರುಬೇಕಾದರೂ ವಸ್ತುಗಳನ್ನು ತೆಗೆದುಕೊಂಡು ಹೋಗಬಹುದು.

ಸ್ವಾತಂತ್ರ್ಯೋತ್ಸವ ದಿನ ಅಧಿಕೃತವಾಗಿ ಪೋಲಿಸ್ ಉಪವಿಭಾಗದ ಅಧೀಕ್ಷಕರು ಡಾ.ಚಂದ್ರಶೇಖರ ರವರು ಚಾಲನೆ ನೀಡಿದರು. ಶ್ರೀಶೈಲ ಪಟ್ಟಣಶೆಟ್ಟಿ, ಡಾ.ಶಿವಕುಮಾರ ಮಾಲಿಪಾಟೀಲ್,ಬಸವರಾಜ ಕೆ ಅಧ್ಯಕ್ಷರು ಬಸವಕೇಂದ್ರ, ಗ್ರಂಥಪಾಲಕ ರಮೇಶ ಗಬ್ಬೂರು, ಶಿಕ್ಷಕ ಮೈಲಾರಪ್ಪ ಬೂದಿಹಾಳ, ಮಂಜುನಾಥ ಗುಡ್ಲಾನೂರ , ಎಸ್ ಬಿ ಗೊಂಡಬಾಳ ತಾಲೂಕ ಕಸಾಪ ಅಧ್ಯಕ್ಷರು , ದಶರಥ ವರದಿಗಾರ, ಹಾಗೂ ವಾಲ್‌ ಆಫ್‌ ಕೈಂಡ್‌ ನೆಸ್ ಗೆಳೆಯರು ಸೇರಿದಂತೆ ಇತರರು ಭಾಗವಹಿಸಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

6 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420