40 ಕೇಸು ಹಾಕಿಸಿಕೊಂಡಿರುವ ವ್ಯಕ್ತಿಯಿಂದ ಚಿತ್ತಾಪುರ ಭವಿಷ್ಯ ಸಾದ್ಯವೇ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕಲಬುರಗಿ: ಕೇವಲ 26 ವಯಸ್ಸಿಗೆ 40 ಕೇಸು ಹಾಕಿಸಿಕೊಂಡಿರುವ ಬಿಜೆಪಿ ಅಭ್ಯರ್ಥಿಯಿಂದ ಚಿತ್ತಾಪುರದ ಯುವಕರ ಭವಿಷ್ಯ ‌ರೂಪುಗೊಳ್ಳುತ್ತದೆಯೇ? ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಬೆಣ್ಣೂರು ( ಬಿ ) ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ,, ನೀವು ಮಣಿಕಂಠನ ಜೊತೆಗೆ ಹೋದರೆ, ನಿಮ್ಮ ಮಕ್ಕಳು ಕೂಡಾ ಆರೋಪಿ 1, ಆರೋಪಿ 2, ಆರೋಪಿ 3 ಆಗುತ್ತಾರೆ. ಆಮೇಲೆ ನಿಮ್ಮ ಮಕ್ಕಳನ್ನು ಬಿಡಿಸಿಕೊಂಡು ಬರಲು ನನ್ನ ಬಳಿಗೆ ಬರಬೇಡಿ ಎಂದು ಹೇಳಿದರು.

ದುಷ್ಟಶಕ್ತಿಗಳನ್ನು ಹೊರಗಿಡಿ ಹೊರಗಿನಿಂದ ಬಂದವನನ್ನು ಹೊರಗಿನಿಂದಲೇ ಕಳಿಸಿಬಿಡಿ ಚಿತ್ತಾಪುರದ ಮೊಮ್ಮಗನಾದ ನನ್ನನ್ನು ಆರಿಸಿ‌ಕಳಿಸಿ ಎಂದು ಮನವಿ ಮಾಡಿ, ಕಾಂಗ್ರೆಸ್ ಸಂಪೂರ್ಣ ಬಹುಮತದೊಂದಿದೆ ಅಧಿಕಾರಕ್ಕೆ‌ ಬರಲು ನೀವು ಆಶೀರ್ವದಿಸಿದರೆ ಗೃಹ ಲಕ್ಷ್ಮಿ, ಗೃಹ ಜ್ಯೋತಿ ಸೇರಿದಂತೆ ಐದು ಪ್ರಮುಖ ಯೋಜನೆಗಳನ್ನು ಕೂಡಲೇ ಜಾರಿಗೆ ತರುತ್ತೇವೆ ಎಂದು‌ ಭರವಸೆ ನೀಡಿದರು.

ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಯುವನಿಧಿ ಯೋಜನೆ ಅಡಿಯಲ್ಲಿ ನಿರುದ್ಯೋಗಿ ಪದವಿಧರ ಯುವಕರಿಗೆ ಪ್ರತಿತಿಂಗಳು ರೂ 3000 ಹಾಗೂ ಡಿಪ್ಲೋಮಾ ಆದವರಿಗೆ ರೂ 2000 ನೀಡಲಾಗುವುದು ಎಂದರು.

ವೇದಿಕೆಯ ಮೇಲೆ ಭೀಮಣ್ಣ ಸಾಲಿ, ರಮೇಶ ಮರಗೋಳ, ಇಕ್ಬಾಲ್ ಸಾಬ್, ಶಂಭುಲಿಂಗ ಗುಂಡುಗುರ್ತಿ, ಶಿವಯ್ಯ ಗುತ್ತೇದಾರ, ಶಿವರಾಜ‌ ಪಾಟೀಲ, ಶಿವಕುಮಾರ ಯಾಗಾಪುರ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

1 hour ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420