ಕಲಬುರಗಿ: ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಲಯದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಪಿ.ಯು.ಸಿ ದ್ವಿತೀಯ ವರ್ಷದಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಆವ್ಹಾನಿಸಿ ಸತ್ಕರಿಸಲಾಯಿತು.
ಮೊದಲಿಗೆ ಕು.ಅಶ್ವಿನಿ ಪಾಟೀಲ- ಬಿ.ಕಾಂ ದ್ವಿತೀಯ ಸೆಮೆಸ್ಟರ್ ಇವರು ಪ್ರಾರ್ಥನೆ ಗೀತೆ ಹಾಡಿದರು. ಪ್ರೊ. ಉಮಾ ಮಿಣಜಿಗಿ ಅವರು ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮಕ್ಕೆ ಡಾ.ಶಾಂತಾ ಮಠ, ಡಾ. ನಾಗೇಂದ್ರ ಮಸೂತಿ ಹಾಗೂ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಪಾಟೀಲ ಆಗಮಿಸಿದ್ದರು.
ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಡಾ.ಶಾಂತಾ ಮಠ ಅವರು ಮಾತನಾಡುತ್ತ ನೀವು ಪಿ.ಯು.ಸಿ ದ್ವಿತೀಯ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿದ್ದಿರಿ. ಮುಂದೆ ನೀವು ಓದಬೇಕಾದ್ರೆ ಸ್ವತಃ ವಿಚಾರಿಸಿರಿ. ನಿಮ್ಮ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಅದು ನಿಮ್ಮ ಕೈಯಲ್ಲಿ ಇದೆ ಎಂದರು. ಡಾ. ನಾಗೇಂದ್ರ ಮಸೂತಿ ಮತ್ತು ಶ್ರೀಮತಿ ಉಷಾದೇವಿ ಪಾಟೀಲ ಅವರು ಮತನಾಡಿದರು.
ಕಲಬುರಗಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ 35 ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾಲೇಜಿನ ಪ್ರಾಧ್ಯಾಪಕರಾದ ಉಮಾ ಪಾಟೀಲ, ನಮ್ರತಾ, ಕನ್ಯಾಕುಮಾರಿ, ಅಂಬಿಕಾ, ಸಂಗಮೇಶ,ಅನುರಾಧ ಮತ್ತು ರೀತಾ ಅವರುಗಳು ಉಪಸ್ಥಿತರಿದ್ದರು.
ಕೊನೆಯಲ್ಲಿ ಶ್ರೀಮತಿ ಉಮಾ ಪಾಟೀಲರು ವಂದಿಸಿದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…