ಬಿಸಿ ಬಿಸಿ ಸುದ್ದಿ

ಕಲಬುರಗಿ ದಕ್ಷಿಣದಲ್ಲಿ ಬಿಜೆಪಿ ಪರ ಹಣ ಹಂಚಿಕೆ ಆರೋಪ; ಇಬ್ಬರನ್ನು ಬೆನ್ನಟ್ಟಿ ಹಿಡಿದ ಜಿಲ್ಲಾಧಿಕಾರಿ | ಪ್ರಕರಣ ದಾಖಲು

ಕಲಬುರಗಿ; ಸೋಮವಾರ ರಾತ್ರಿಯ ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ನೀತಿ ಸಂಹಿತೆ ಉಲ್ಲಂಘಿಸಿ ಮಧ್ಯ ಮತ್ತು ಹಣ ವಿತರಣೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರಿಬ್ಬರನ್ನು ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಅವರಿಗೆ ಬೆನ್ನಟ್ಟಿ ಹಿಡುವ ಮೂಲಕ ಆಕ್ರಮ ಚುನಾವಣೆ ನಡೆಸುವರಿಗೆ ಶಾಕ್ ನೀಡಿದ್ದಾರೆ.

ನಗರದ ಸಂಗಮೇಶ್ವರ ಬಡಾವಣೆ ಹತ್ತಿರ ಅಕ್ರಮವಾಗಿ ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿ ಮಧ್ಯ ಮತ್ತು ಹಣ ವಿತರಣೆಯಾಗುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದರು.

ಸ್ಥಳದಲ್ಲಿ ಮೂರು ಜನ ಸವಾರರನ್ನು ಹೊಂದಿದ ವಾಹನವೊಂದು (ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ವಾಹನ) ಇರುವುದು ಕಂಡುಬಂದಿರುತ್ತದೆ. ವಿಚಾರಿಸಲು ಮುಂದಾದಾಗ ವಾಹನವು ಅತೀ ವೇಗದಲ್ಲಿ ಸ್ಥಳದಿ೦ದ ನಿರ್ಗಮಿಸಿತ್ತು. ಅದರಂತೆ ಸದರಿವಾಹವನ್ನು ಹಿಂಬಾಲಿಸಿ ವಿದ್ಯಾನಗರದ ಹನುಮಾನ ದೇವಸ್ಥಾನದ ಹತ್ತಿರ ತಡೆಗಟ್ಟದಾಗ ವಾಹದಲ್ಲಿದ್ದ ಒಬ್ಬ ವ್ಯಕ್ತಿಯು ಸ್ಥಳದಿ೦ದ ಕೂಡಲೇ ಒಂದು ಬ್ಯಾಗನೊಂದಿಗೆ ಒಡಿಹೋಗಿರುತ್ತಾನೆ ಮತ್ತು ಉಳಿದ ಇನ್ನಿಬ್ಬರನ್ನು ಕಛೇರಿ ವಾಹನ ಚಾಲಕರು ಮತ್ತು ಸಿಬ್ಬಂದಿ ಕೂಡಿಕೊಂಡು ತಡೆಹಿಡಿದು ಪ್ರಶ್ನಿಸಲಾಯಿತು ಎಂದು ಜಿಲ್ಲಾಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಂತರ ಪೋಲಿಸ ಆಯುಕ್ತರು. ನಗರ ಹಾಗೂ ಸಿಟಿ ಪೊಲೀಸ್ ಕಂಟ್ರೋಲ್ ರೂಮ ಇವರ ಗಮನಕ್ಕೆ ತರಲಾಯಿತು. ಆದ ಕಾರಣ ಸದರಿ ಘಟನೆಯ ಕುರಿತು ಐಪಿಸಿ u/s 171 , H 321, 353 ರಡಿ ಹಾಗೂ ಅನ್ವಯಿಸುವ ಸೂಕ್ತ ಕಾನೂನಿನಡಿ ಪ್ರಕರಣವನ್ನು ದಾಖಲಿಸಿಕೊಂಡು ಘಟನೆ ವೇಳೆಯಲ್ಲಿ ಪಲಾಯನಗೈದ ವ್ಯಕ್ತಿಯ ಕುರಿತು ಹಾಗೂ ಯಾವ ಕೃತ್ಯ ಪ್ರಸ್ತಾಪಿಸಿದ ಸ್ಥಳದಲ್ಲಿ ಜರುಗಿದೆ ಎನ್ನುವ ಕುರಿತು ವಿಚಾರಣೆ ಜರುಗಿಸಲು ಪೊಲೀಸ್ ಆಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

emedialine

Recent Posts

ಚಳವಳಿ, ಹೋರಾಟದಿಂದಲೇ ದಲಿತ ಸಾಹಿತ್ಯ ಉದಯ: ದಲಿತ ಚಳವಳಿ ಸಾಹಿತ್ಯ ಸಮ್ಮೇಳನ

ಕಲಬುರಗಿ: ದಲಿತ, ಹಿಂದುಳಿದವರು, ದೀನರು ಎಂದು ಹೇಳಿಕೊಂಡು ಎಷ್ಟು ದಿನ ಅಂತಾ ಜೀವನ ಸಾಗಿಸಬೇಕು. ಸಾಧನೆ ಮಾಡಿ ಸಾಧಕರಾಗಿ ಸಾಯೋಣ.…

9 hours ago

ಕಲಬುರಗಿ ಪ್ರವಾಸಿ ತಾಣಗಳ ಆಯ್ಕೆಗೆ ಆನ್‌ಲೈನ್‌ ಮೂಲಕ ವೋಟ್‌ ಮಾಡಲು ಡಿ.ಸಿ. ಮನವಿ

ಕಲಬುರಗಿ: ಕೇಂದ್ರದ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಾರ್ವವಜನಿಕರು ಮತ್ತು ಪ್ರವಾಸಿಗರೆ ಪ್ರವಾಸೋದ್ಯಮ ತಾಣಗಳನ್ನು ಆಯ್ಕೆ…

10 hours ago

ಎರಡನೇ ದಿನದ ಪ್ರಥಮ ದಲಿತ ಚಳವಳಿ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಹೋರಾಟದ ಸಾಗರಕ್ಕೆ ಡಾ. ಡಿ.ಜಿ. ಸಾಗರ ಅವರ ಮಹಾ ಸಾಗರವೇ ಆಗಿದ್ದಾರೆ. ನೋವು, ಅವಮಾನ ಸಹಿಸಿ ಬಹು ಎತ್ತರಕ್ಕೆ…

10 hours ago

ಶ್ರೀ ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ನಾಳೆ

ಕಲಬುರಗಿ: ಧಾರ್ಮಿಕ ದತ್ತಿ ಇಲಾಖೆಯ ಕಾಳಗಿ ತಾಲ್ಲೂಕಿನ ರೇವಗ್ಗಿ ರಟಕಲ್ ಶ್ರೀ ರೇವಣಸಿದ್ದೇಶ್ವರ ಗುಡ್ಡದಲ್ಲಿ ನಾಳೆ ಶ್ರಾವಣ ಮಾಸದ ನಡುವಿನ…

12 hours ago

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ

ಕಲಬುರಗಿ; ನಗರದ ಎಐಟಿಸಿ ಕಚೇರಿಯ ಹತ್ತಿರದ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (CPI) ನಗರ ಹಾಗೂ ತಾಲ್ಲೂಕಾ ಸಮಾವೇಶ…

12 hours ago

ಬೂಟು ಧರಿಸಿ ಧ್ವಜಾರೋಹಣ ಮಾಡಿದ ಶಿಕ್ಷಕನ ಅಮಾನತಿಗೆ ಆಗ್ರಹ

ಸುರಪುರ: ಆಗಷ್ಟ್ 15 ರಂದು ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದ ಸರಕಾರಿ ಹಿರಿಯ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420