ಸುರಪುರ: ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರು ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಿಸಿದರು.
ನಗರದ ಮಹಾತ್ಮ ಗಾಂಧಿ ವೃತ್ತ,ರಂಗಂಪೇಟೆ, ತಿಮ್ಮಾಪುರ, ಕವಡಿಮಟ್ಟಿ,ದೇವರಗೋನಾಲ,ರತ್ತಾಳ,ದೇವಿಕೇರ,ದೇವಾಪುರ,ಲಕ್ಷ್ಮೀಪುರ ಹೀಗೆ ಅನೇಕ ಕಡೆಗಳಲ್ಲಿ ರಾಜಾ ವೆಂಕಟಪ್ಪ ನಾಯಕರ ಗೆಲುವಿಗೆ ಪಟಾಕಿ ಸಿಡಿಸಿ,ಗುಲಾಲು ಎರಚಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಕುಣಿದಾಡಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ರಾಜುಗೌಡ ಅವರಿಗಿಂತ 25176 ಮತಗಳ ಅಂತರ ದಿಂದ ಗೆಲುವು ಸಾಧಿಸಿದ್ದರು.