ರಾಜಾ ವೆಂಕಟಪ್ಪ ನಾಯಕಗೆ ಸಚಿವ ಸ್ಥಾನ ನೀಡುವಂತೆ ಮುಖಂಡರ ಒತ್ತಾಯ

0
15

ಸುರಪುರ: ಇಲ್ಲಿಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಾಜಾ ವ ವೆಂಕಟಪ್ಪ ನಾಯಕ ಅವರು 25223 ಮತಗಳ ಅಂತರ ದಿಂದ ಗೆಲ್ಲುತ್ತಿದ್ದಂತೆ ತಾಲೂಕಿನ ಅನೇಕ ಮುಖಂಡು ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಎಸ್ಟಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ದೊರೆ ಆಲ್ದಾಳ,ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ ಬೇಟೆಗಾರ,ದಲಿತಪರ ಹೋರಾಟಗಾರರಾದ ಮಲ್ಲಿಕಾರ್ಜುನ ಕ್ರಾಂತಿ,ಮಾಳಪ್ಪ ಕಿರದಳ್ಳಿ,ಕಾರ್ಮಿಕ ಹೋರಾಟಗಾರ ದೇವಿಂದ್ರಪ್ಪ ಪತ್ತಾರ,ತಿಮ್ಮಯ್ಯ ತಳವಾರ,ಸೇರಿದಂತೆ ಅನೇಕ ಮುಖಂಡರು ಈ ಕುರಿತು ಹೇಳಿಕೆಯನ್ನು ನೀಡಿದ್ದು,

Contact Your\'s Advertisement; 9902492681

ರಾಜಾ ವೆಂಕಟಪ್ಪ ನಾಯಕ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾಗಿದ್ದಾರೆ,ಅಲ್ಲದೆ ನಾಲ್ಕನೇ ಬಾರಿ ಶಾಸಕರಾಗಿದ್ದಾರೆ, ಎಮ್.ಬಿ.ಬಿ.ಎಸ್‍ನಂತರ ಉನ್ನತ ವ್ಯಾಸಂಗ ಮಾಡಿದ್ದಾರೆ ಅಂತಹ ವ್ಯಕ್ತಿಗೆ ಸಚಿವ ಸ್ಥಾನ ನೀಡುವುದರಿಂದ ನಾಡಿನ ಅಭಿವೃಧ್ಧಿಗೆ ಪೂರಕವಾಗಲಿದೆ ಜೊತೆಗೆ ಈಗಾಗಲೇ ಅವರು ಇದು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದಾರೆ.

ಹೀಗಿರುವಾಗ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈಬಾರಿಯ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರನ್ನಾಗಿ ಮಾಡುವ ಮೂಲಕ ಅವರಿಗೆ ನಾಡಿನ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಹೈಕಮಾಂಡ್‍ಗೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here