ಕಲಬುರಗಿ; ವಿಶ್ವ ಅಮ್ಮಂದಿರ ದಿನದ ಪ್ರಯುಕ್ತ ಜೈನ್ ಸಾಮಾಜಿಕ ತಂಡ ಸಂಗಿನಿ ಹಾಗೂ ಅಲ್-ಬದರ್ ಮಹಾವಿದ್ಯಾಲಯ ಆಸ್ಪತ್ರೆಯ ವತಿಯಿಂದ ಮಹಾದೇವಿ ತಾಯಿ ವಿದ್ಯಾವರ್ಧಕ ಸಂಘದ ವೃದ್ಧಾಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಸಂಗಿನಿ ತಂಡದ ಅಧ್ಯಕ್ಷೆ ಡಾ. ಪ್ರಣೋತಿ ಇಟಾಗಂಪಳ್ಳಿ ಹಾಗೂ ಡಾ.ಸಂಗೀತಾ ಮಹೇಂದ್ರಕರ್ ಮಾತನಾಡಿ, ಆರೋಗ್ಯಕ್ಕೆ ಹಲ್ಲುಗಳ ಪಾತ್ರಮುಖ್ಯ ಆರೋಗ್ಯ ಚೆನ್ನಾಗಿ ಇರಬೇಕಾದರೆ ಹಲ್ಲಿನ ಆರೋಗ್ಯ ಮೊದಲು ಸರಿಯಿರಬೇಕು. ಹಲ್ಲುಗಳು ಸರಿಯಾಗಿದ್ದಾಗ ಎಲ್ಲ ಬಗೆಯ ಆಹಾರ ಸೇವಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಎಲ್ಲಾ ವೃದ್ಧಾಶ್ರಮದ ಜನರಿಗೆ ಈ ಉಚಿತ ದಂತ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ವೈದ್ಯ ತಂಡದವರು ವೃದ್ಧಾಶ್ರಮದ ನಿವಾಸಿಗಳಿಗೆ ಉಚಿತ ದಂತ ಚಿಕಿತ್ಸೆ ಸಲುವಾಗಿ ಅಲ್-ಬದರ್ ಮಹಾವಿದ್ಯಾಲಯ ವತಿಯಿಂದ ಉಚಿತ ಬಸ ವ್ಯವಸ್ಥೆ ಕೂಡ ಮಾಡಲಾಗಿದೆ. ಈ ಕಾರ್ಯಕ್ರಮದ ನಿಮಿತ್ತವಾಗಿ ಎಲ್ಲಾ ವೃದ್ಧಾಶ್ರಮದ ನಿವಾಸಿಗಳಿಗೆ ಉಪಹಾರ ಮತ್ತು ಹಣ್ಣು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೇತನ ದೋಶಿ, ಸುನೀಲ ಲೋಡಾ, ಡಾ.ಖಾಜಾ ಮೈನುದಿನ್, ಶಿತಲ ಕುಲಕರ್ಣಿ, ಜಯಾ ಅಂಚಲಿಯಾ ಸೇರಿದಂತೆ ಸಂಗಿನಿ ತಂಡದ ಎಲ್ಲಾ ಮಹಿಳೆಯರು ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…